Home ಬ್ರೇಕಿಂಗ್ ಸುದ್ದಿ ಕೋವಿಡ್ ಹಗರಣ: ನ್ಯಾಯಮೂರ್ತಿ ಡಿ ಕುನ್ಹಾ ಸಮಿತಿಯ ವರದಿ ಅಂಗೀಕರಿಸಿದ ಸರ್ಕಾರ

ಕೋವಿಡ್ ಹಗರಣ: ನ್ಯಾಯಮೂರ್ತಿ ಡಿ ಕುನ್ಹಾ ಸಮಿತಿಯ ವರದಿ ಅಂಗೀಕರಿಸಿದ ಸರ್ಕಾರ

0

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ಎರಡನೇ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ಅವರ ನೇತೃತ್ವದ ತಂಡ ನೀಡಿದ ವರದಿಯನ್ನು ಗುರುವಾರ ರಾಜ್ಯ ಸರ್ಕಾರ ಅಂಗೀಕರಿಸಿದೆ.

ಈ ತಿಂಗಳ ಆರಂಭದಲ್ಲಿ ಸರ್ಕಾರಕ್ಕೆ ಸಲ್ಲಿಸಿದ ಎರಡನೇ ವರದಿಯಲ್ಲಿ, ಆಯೋಗವು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ ಮತ್ತು ಕೊಪ್ಪಳದಲ್ಲಿ ಕೋವಿಡ್ -19 ವಿರುದ್ಧ ಹೋರಾಡಲು ಖರ್ಚು ಮಾಡಿದ ಒಟ್ಟು 275 ಕೋಟಿ ರೂ.ಗಳಲ್ಲಿ 176 ಪ್ರಕರಣಗಳನ್ನು ದಾಖಲಿಸಲು ಮತ್ತು 128 ಕೋಟಿ ರೂ.ಗಳನ್ನು ವಸೂಲಿ ಮಾಡಲು ಶಿಫಾರಸು ಮಾಡಿದೆ.

ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ಅವರ ನೇತೃತ್ವದ ತಂಡ ನೀಡಿದ ವರದಿಯನ್ನು ನಾವು ಈ ತಿಂಗಳ ಮೊದಲ ವಾರದಲ್ಲೇ ಸ್ವೀಕರಿಸಿದ್ದೇವೆ. ಮತ್ತು ಗುರುವಾರ ಅಂಗೀಕರಿಸಲಾಗಿದೆ. ವರದಿಯ ಅನ್ವಯ ಮುಂದಿನ ಕ್ರಮದ ಬಗ್ಗೆ ಚರ್ಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

“ಕೆಲವು ಗಂಭೀರ ಪ್ರಕರಣಗಳಲ್ಲಿ ಹೆಚ್ಚಿನ ತನಿಖೆಯನ್ನು ಲೋಕಾಯುಕ್ತ ಅಥವಾ ಇತರ ತನಿಖಾ ಸಂಸ್ಥೆಗಳಿಗೆ ವಹಿಸಬಹುದು ಮತ್ತು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಮೂಲಕ ಸರ್ಕಾರಕ್ಕೆ ಉಂಟಾದ ನಷ್ಟವನ್ನು ವಸೂಲಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಆಯೋಗ ಹೇಳಿದೆ. ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳು/ ನೌಕರರ ವಿರುದ್ಧ ಇಲಾಖಾ ತನಿಖೆಗೆ ಆಯೋಗ ಶಿಫಾರಸು ಮಾಡಿದೆ

You cannot copy content of this page

Exit mobile version