Home ಜನ-ಗಣ-ಮನ ಧರ್ಮ- ಸಂಸ್ಕೃತಿ ಈ ಬಾರಿ ಅದ್ದೂರಿ ದಸರಾ ಮಾಡಲು‌ ನಮ್ಮ ಸರ್ಕಾರ ತೀರ್ಮಾನ : ಸಚಿವ ಹೆಚ್.ಸಿ ಮಹದೇವಪ್ಪ

ಈ ಬಾರಿ ಅದ್ದೂರಿ ದಸರಾ ಮಾಡಲು‌ ನಮ್ಮ ಸರ್ಕಾರ ತೀರ್ಮಾನ : ಸಚಿವ ಹೆಚ್.ಸಿ ಮಹದೇವಪ್ಪ

0

ಈ ಬಾರಿ ಅದ್ದೂರಿ ದಸರಾ ಮಾಡಲು‌ ನಮ್ಮ ಸರ್ಕಾರ ಮುಂದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಜಪಡೆಗಳನ್ನ ವಿದ್ಯುಕ್ತವಾಗಿ ಗಜಪಯಣ ಮೂಲಕ‌ ಸ್ವಾಗತ ಕೋರಲಾಗಿದೆ. 30 ಕೋಟಿ ಅನುದಾನ ಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ, ನಾಡ ದೇವತೆ ಚಾಮುಂಡೇಶ್ವರಿ ತಾಯಿಯ ಮೇಲೆ ಸಾಕಷ್ಟು ನಂಬಿಕೆ ಇಟ್ಟಿದ್ದಾರೆ, ಮೊದಲ‌ ಹಂತದಲ್ಲಿ 9 ಆನೆಗಳು ಕಾಡಿನಿಂದ ನಾಡಿಗೆ ಬರುತ್ತಿವೆ ಎಂದು ಹೇಳಿದ್ದಾರೆ.

ಇನ್ನೂ‌ 5 ಆನೆಗಳು ತದ ನಂತರ ಅರಮನೆಗೆ ಬರುತ್ತದೆ, ಮಾವುತರು ಹಾಗೂ ಕಾವಾಡಿಗರಿಗೆ ಪ್ರೋತ್ಸಾಹ ನೀಡುತ್ತೇವೆ, ದೇಶ ವಿದೇಶಗಳಿಂದ ಲಕ್ಷಾಂತರ ಜನರು ಬರುತ್ತಾರೆ, ಅದ್ಧೂರಿ ದಸರಾ ಆಚರಣೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ, ಧಾರ್ಮಿಕ ವಿಚಾರ, ರಾಜ್ಯಡಳಿತವನ್ನು ಸಂರಕ್ಷಣೆ ಮಾಡುವ ದೃಷ್ಟಿಯಿಂದ ಈ ಬಾರಿ ದಸರಾ ಆಚರಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

You cannot copy content of this page

Exit mobile version