ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ (Media Secretaries) ಹಿರಿಯ ಪತ್ರಕರ್ತ ಪಿ.ತ್ಯಾಗರಾಜ್ ಸೇರಿದಂತೆ ಮೂವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR)ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎನ್. ಗಾಯತ್ರಿ ಅವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ನೇಮಕಗೊಂಡ ಪ್ರಮುಖರು ಮತ್ತು ಹುದ್ದೆಗಳ ವಿವರ ಇಂತಿದೆ: ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಹಾಗೂ ಅವರ ಹೆಸರಿನಲ್ಲಿ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಈ ಕೆಳಗಿನ ಮೂವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ನೇಮಿಸಿ ಆದೇಶಿಸಲಾಗಿದೆ.
ಹೆಸರು ಮತ್ತು ವಿವರ ನೇಮಿಸಲಾದ ಹುದ್ದೆ
1. ಪಿ. ತ್ಯಾಗರಾಜ್, ಬೆಂಗಳೂರು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ – 1
2. ಆರ್. ಜಯಪ್ರಕಾಶ್, ಬೆಂಗಳೂರು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ – 2
3. ರಾಘವೇಂದ್ರ ಭಟ್, ಬೆಂಗಳೂರು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ – 3
ಪಿ. ತ್ಯಾಗರಾಜ್ ಅವರು ಕರ್ನಾಟಕ ಮಾಧ್ಯಮ ರಂಗದಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ಹಿರಿಯ ಪತ್ರಕರ್ತರಾಗಿದ್ದಾರೆ. ಇವರು ಮುಖ್ಯವಾಹಿಯ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ಹಾಗೂ ಅಂಕಣಕಾರರಾಗಿ ಸೇವೆ ಸಲ್ಲಿಸಿದ್ದು, ಪತ್ರಿಕೋದ್ಯಮದಲ್ಲಿನ ಸುಳ್ಳು ಸುದ್ದಿಗಳ ಹಾವಳಿಯ ಬಗ್ಗೆ ತಮ್ಮ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದರು.
