Home ಬ್ರೇಕಿಂಗ್ ಸುದ್ದಿ ಸರ್ಕಾರದಿಂದ ಜಾತಿಗಣತಿ ಸಮೀಕ್ಷೆಯಲ್ಲಿ ಭಾಗಿಯಾದವರಿಗೆ ಗೌರವಧನ ಬಿಡುಗಡೆ

ಸರ್ಕಾರದಿಂದ ಜಾತಿಗಣತಿ ಸಮೀಕ್ಷೆಯಲ್ಲಿ ಭಾಗಿಯಾದವರಿಗೆ ಗೌರವಧನ ಬಿಡುಗಡೆ

0

ರಾಜ್ಯ ಸರ್ಕಾರದಿಂದ ಜಾತಿಗಣತಿ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಗೌರವಧನ ಬಿಡುಗಡೆ ಆದೇಶ ಹೊರಡಿಸಿದೆ. ಸಮೀಕ್ಷೆಯ ಮೂಲಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಮಾಹಿತಿ ಸಂಗ್ರಹಿಸಲಾದ ಈ ಕಾರ್ಯಕ್ಕೆ 1,27,73,45,200 ರೂಪಾಯಿ ಅನುದಾನವಾಗಿ ಬಿಡುಗಡೆ ಮಾಡಲಾಗಿದೆ.

ಸಮೀಕ್ಷಾದಾರರಿಗೆ ಮನೆಮೇಲೆ ₹100 ಮತ್ತು ₹5,000 ಒಟ್ಟಾರೆ ಗೌರವಧನ ಹಾಗೂ ಮೇಲ್ವಿಚಾರಕರಿಗೆ ₹10,000 ನೀಡಲಾಗುತ್ತದೆ. ಸಮೀಕ್ಷೆಯ ಪ್ರಮುಖ ಉದ್ದೇಶವು ರಾಜ್ಯದ ಹಿಂದುಳಿದ ವರ್ಗಗಳ ಸಮಾಜ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗಳನ್ನು ವಿವರವಾಗಿ ತಿಳಿದುಕೊಳ್ಳುವುದು ಹಾಗೂ ಸರ್ಕಾರದ ಯೋಜನೆಗಳಿಗೆ ರೂಢಿಗೊಳಿಸುವುದು.

ಈ ಗೌರವಧನ ಅನುದಾನವು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಂಚಿಕೆಯಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಕೆಳಗಿನ ಷರತ್ತುಗಳಿಗೆ ಒಳಪಟ್ಟು ಬಿಡುಗಡೆ ಮಾಡಿ ಆದೇಶಿಸಿದೆ.

ಷರತ್ತುಗಳು:
1. ಒಂದು ಮತ್ತು ಎರಡು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವ ಬಗ್ಗೆ ತಲಾ ರೂ.50/-ರಂತೆ ಹಾಗೂ ಮೂರು ಮತ್ತು ಮೂರಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವ ಬಗ್ಗೆ ತಲಾ ರೂ.100/- ರಂತೆ ಪಾವತಿಸುವುದು.
2. EDCS ನಿಂದ ಪಡೆದಿರುವಂತೆ ಸಮೀಕ್ಷಾದಾರರ ಹೆಸರು ಮತ್ತು ಅವರಿಗೆ ಪಾವತಿಸಬೇಕಾಗಿರುವ ಮೊತ್ತದ ವಿವರವನ್ನು ಜಿಲ್ಲಾವಾರು ಪ್ರತ್ಯೇಕವಾಗಿ ನೀಡಲಾಗಿದೆ.
3. ಸಮೀಕ್ಷೆಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾಗುವ ಅನುದಾನ ಹಾಗೂ ವೆಚ್ಚದ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು ಹಾಗೂ ನಿಯಮಾನುಸಾರ ವೆಚ್ಚಗಳನ್ನು ಭರಿಸಿದ ನಂತರ ಹಣ ವಿನಿಯೋಗ ಪ್ರಮಾಣ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದು.

You cannot copy content of this page

Exit mobile version