BREAKING NEWS: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ

ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಷಯ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ಕಡತವನ್ನು ಮತ್ತೆ ರಾಜ್ಯಪಾಲರ ಕಡೆ ಕಳುಹಿಸಿದ ಹಿನ್ನೆಲೆಯಲ್ಲಿ ಈಗ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಲವು ಸಲಹೆಗಳ ಅಡಿಯಲ್ಲಿ ಮೂಲ ಕಡತದಲ್ಲಿ ಒಂದಷ್ಟು ಬದಲಾವಣೆ ಮಾಡುವ ಮೂಲಕ ಸುಗ್ರೀವಾಜ್ಞೆ ಜಾರಿಗೆ ಬರುವಂತೆ ಸೂಚಿಸಲಾಗಿದೆ.

ಈ ಬಗ್ಗೆ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚಿಸಿ ಕಾನೂನು ಜಾರಿಗೆ ತರಬೇಕು ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು