ಬೆಂಗಳೂರು: ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಕರ್ನಾಟಕ ಸರ್ಕಾರ ನಿಷೇಧಿಸಿದೆ. ಈ ಸಂಬಂಧ ಇಂದು ಆದೇಶ ಹೊರಡಿಸಲಾಗಿದೆ.
ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವುದರಿಂದ ಇತರ ಭಕ್ತರು ಮತ್ತು ಸಿಬ್ಬಂದಿಗೆ ತೊಂದರೆಯಾಗುತ್ತದೆ ಎಂದು ಸರ್ಕಾರ ಹೇಳಿದೆ. ಎಲ್ಲಾ ಭಕ್ತರು ದೇವಸ್ಥಾನದ ಒಳಗೆ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ತಮಿಳುನಾಡಿನ ದೇವಸ್ಥಾನಗಳಲ್ಲೂ ಜಾರಿಯಲ್ಲಿದೆ. ತಮಿಳುನಾಡಿನಲ್ಲೂ ಇದೇ ನಿಯಮ ಅನುಸರಿಸಲಾಗುತ್ತಿದೆ.
ತಮಿಳುನಾಡು ರಾಜ್ಯದ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. 2022ರ ಡಿಸೆಂಬರ್ನಲ್ಲಿ ಅರ್ಜಿಯೊಂದರ ವಿಚಾರಣೆ ವೇಳೆ ನ್ಯಾಯಾಲಯವು ರಾಜ್ಯ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಈ ಆದೇಶ ನೀಡಿದೆ. ನ್ಯಾಯಾಲಯವು ತನ್ನ ಆದೇಶದಲ್ಲಿ ದೇವಾಲಯಗಳಲ್ಲಿ ಶುದ್ಧತೆ ಕಾಪಾಡುವ ಬಗ್ಗೆ ಮಾತನಾಡಿತ್ತು.

ಕರ್ನಾಟಕದಲ್ಲಿಯೂ ಈ ಹಿಂದೆ ಈ ವಿಷಯ ಚರ್ಚೆಯಾಗಿತ್ತು, ಆದರೆ ಈಗ ಅದನ್ನು ಔಪಚಾರಿಕವಾಗಿ ನಿಷೇಧಿಸಲಾಗಿದೆ. ಭಕ್ತರು ಮತ್ತು ಸಿಬ್ಬಂದಿ ದೇವಸ್ಥಾನದ ಒಳಗೆ ಫೋನ್ ಕೊಂಡೊಯ್ಯಲು ಅನುಮತಿಸಲಾಗುವುದಿಲ್ಲ ಅಥವಾ ಸಾಧನಗಳನ್ನು ಸ್ವಿಚ್ ಆಫ್ ಮಾಡಬೇಕಾಗುತ್ತದೆ.
ಇದೇ ರೀತಿಯ ನಿರ್ಧಾರದಲ್ಲಿ, ಉತ್ತರಾಖಂಡದ ಶ್ರೀ ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿಯು ಕೇದಾರನಾಥ ದೇವಾಲಯದ ಸಂಕೀರ್ಣದೊಳಗೆ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಘೋಷಿಸಿದೆ. ಕೇದಾರನಾಥ ದೇವಾಲಯದ ಸಂಕೀರ್ಣದೊಳಗೆ ದೇವಾಲಯದ ಸಮಿತಿಯು ಹಲವಾರು ಎಚ್ಚರಿಕೆಯ ಫಲಕಗಳನ್ನು ಹಾಕಿದ್ದು, ಯಾರಾದರೂ ಫೋಟೋ ತೆಗೆಯುವುದು ಅಥವಾ ವಿಡಿಯೋ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ. ಈಚೆಗೆ ದೇವಸ್ಥಾನದ ಆವರಣದಲ್ಲಿ ವಿಡಿಯೋ ಚಿತ್ರೀಕರಣದ ಹಲವಾರು ಘಟನೆಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.