Thursday, June 13, 2024

ಸತ್ಯ | ನ್ಯಾಯ |ಧರ್ಮ

ಕರ ಸೇವಕರ ಮೇಲೆ ಕಾಳಜಿಯಿದ್ದಿದ್ದರೆ ಬಿಜೆಪಿ ತನ್ನ ಸರ್ಕಾರವಿದ್ದಾಗ ಅವರ ಮೇಲಿನ ಕೇಸುಗಳನ್ನು ಹಿಂಪಡೆಯಬೇಕಿತ್ತು: ಶೆಟ್ಟರ್

ಬೆಂಗಳೂರು: ಅಯೋಧ್ಯೆ ಬಾಬರಿ ಮಸೀದಿ ಧ್ವಂಸದ ನಂಥರ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದು, ಇದನ್ನು ಸರ್ಕಾರವೇ ಮಾಡಿದೆ ಎನ್ನುವಂತೆ ಬಿಜೆಪಿ ಬಿಂಬಿಸುತ್ತಿರುವುದು ಸರಿಯಲ್ಲ. ಈ ವಿಷಯದಲ್ಲಿ ರಾಜಕೀಯ ಸಲ್ಲ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಕರ ಸೇವಕರ ಬಂಧನದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸುವುದಾಗಿ ಹೇಳಿರುವ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು “ಅವರು ಪ್ರತಿಭಟನೆ ಮಾಡುವುದಿದ್ದರೆ ಮಾಡಿಕೊಳ್ಳಲಿ. ಆದರೆ ಸರ್ಕಾರ ಕಾರ್ಯಕರ್ತರನ್ನು ಬಂಧಿಸುವಂತೆ ಆದೇಶ ನೀಡಿಲ್ಲ. ಇದು ನ್ಯಾಯಾಲಯದ ಆದೇಶವಾಗಿರಬಹುದು ಅಥವಾ ಪೊಲೀಸ್‌ ನಿರ್ಧಾರವಾಗಿರಬಹುದು. ಬಿಜೆಪಿ ನಿಜಕ್ಕೂ ಕಾಳಜಿಯಿದ್ದಿದ್ದರೆ ಅವರ ಸರ್ಕಾರವಿದ್ದಾಗ ಈ ಪ್ರಕರಣಗಳನ್ನು ರದ್ದುಗೊಳಿಸಬಹುದಿತ್ತು” ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು “ಅಯೋಧ್ಯೆ ವಿಚಾರದಲ್ಲಿ ರಾಜಕೀಯ ಬೇಡ. ಅಯೋಧ್ಯೆ ವಿಚಾರವಾಗಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಬೇಕು. ಸರ್ಕಾರ ಈ ಕೂಡಲೇ ಪ್ರಕರಣವನ್ನು ವಾಪಾಸ್ ಪಡೆಯಲಿ” ಎಂದು ತಮ್ಮದೇ ಪಕ್ಷದ ಸರ್ಕಾರವನ್ನು ಆಗ್ರಹಿಸಿದರು.

⏩ಪೀಪಲ್ ಮೀಡಿಯಾ⏩ ವಾಟ್ಸಪ್ ಗುಂಪಿಗೆ ಸೇರಲು ಕೆಳಗಿನ ಲಿಂಕ್ ಒಪನ್ ಮಾಡಿ👇

https://chat.whatsapp.com/BoGCVVQyXYVE5m7RhIQRWv

ಈ ಹಿಂದೆ ಬಾಬರಿ ಮಸೀದಿ ಘಟನೆಗೆ ಸಂಬಂಧಿಸಿದಂತೆ ಗಲಭೆಗಳಲ್ಲಿ ಭಾಗಿಯಾದರೆ ಅವರ ವಿರುದ್ಧ ರೌಡಿ ಶೀಟ್‌ ತೆರೆಯಲಾಗುತ್ತಿತ್ತು. ಪ್ರಸ್ತುತ ಅವರಿಗೆ 55-60 ವರ್ಷಗಳಾಗಿವೆ ಹೀಗಾಗಿ ಅವರೆಲ್ಲರ ಮೇಲಿನ ರೌಡಿ ಶೀಟ್‌ ತೆಗೆದು ಹಾಕುವಂತೆ ಕಮಿಷನರುಗಳಿಗೆ ತಿಳಿಸಿದ್ದೇನೆ. ಜೊತೆಗೆ ಸಚಿವ ಸಂಪುಟದಲ್ಲಿ ಈ ವಿಷಯ ಪ್ರಸ್ತಾಪಿಸಿ ಪ್ರಕರಣ ವಾಪಾಸ್ ಮಾಡಿಸುವ ಯತ್ನ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಮೂಲತ ಬಿಜೆಪಿಯವರಾದ ಜಗದೀಶ ಶೆಟ್ಟರ್‌ ಅವರು ಕಳೆದ ಬಾರಿಯ ವಿಧಾನಸಭಾ ಚುನಾವಣೆ ವೇಳೆ ಪಕ್ಷದೊಳಗಿನ ಭಿನ್ನಮತದ ಕಾರಣಕ್ಕೆ ಪಕ್ಷದಿಂದ ಹೊರಬಂದು ಕಾಂಗ್ರೆಸ್‌ ಪಕ್ಷವನ್ನು ಸೇರಿದ್ದರು. ನಂತರ ಹುಬ್ಬಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಕೈ ಚಿನ್ಹೆಯಡಿ ಸ್ಪರ್ಧಿಸಿದ ಅವರು ತಮ್ಮ ಮಾಜಿ ಪಕ್ಷದ ಜ್ಯೂನಿಯರ್‌ ಮಹೇಶ ಟೆಂಗಿನಕಾಯಿ ಅವರೆದುರು ಸೋತಿದ್ದರು.

Related Articles

ಇತ್ತೀಚಿನ ಸುದ್ದಿಗಳು