Sunday, June 16, 2024

ಸತ್ಯ | ನ್ಯಾಯ |ಧರ್ಮ

ಬಿಜೆಪಿ ಟಿಕೆಟ್‌ ವಂಚನೆ ಹಗರಣ: A3 ಆರೋಪಿ ಅಭಿನವ ಹಾಲಶ್ರೀ ಪೊಲೀಸ್‌ ವಶಕ್ಕೆ?

ಬೆಂಗಳೂರು: ಚೈತ್ರಾ ಕುಂದಾಪುರ ನೇತ್ರತ್ವದ ಕಬಾಬ್‌ ಗ್ಯಾಂಗ್‌ ವಂಚನೆ ಪ್ರಕರಣದ ಮೂರನೇ ಆರೋಪಿ ಪೊಲೀಸರ ಬಲೆಗೆ ಬಿದ್ದಿರುವುದಾಗಿ ಮೂಲಗಳು ತಿಳಿಸಿವೆ.

ಗೋವಿಂದ ಬಾಬು ಪೂಜಾರಿ ಎನ್ನುವ ಉದ್ಯಮಿಗೆ ಕೋಟಿ ಲೆಕ್ಕದಲ್ಲಿ ಹಣವನ್ನು ವಂಚಿಸಿದ ಪ್ರಕರಣದಲ್ಲಿ ಬೇಕಾಗಿದ್ದ ಅಭಿನವ ಹಾಲಶ್ರೀ ಸ್ವಾಮಿಯನ್ನು ಸಿಸಿಬಿ ಪೊಲೀಸರು ಒಡಿಶಾದಲ್ಲಿ ತಮ್ಮ ಬಲೆಗೆ ಕೆಡವಿದ್ದಾರೆ ಎನ್ನಲಾಗಿದೆ.

ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಸ್ವಾಮಿಯನ್ನು ಇಂದು ಮಧ್ಯಾಹ್ನ ವೇಳೆಗೆ ಪೊಲೀಸರು ಬೆಂಗಳೂರಿಗೆ ಕರೆದು ತರಲಿದ್ದಾರೆ ಎನ್ನಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಪ್ರಕರಣ ಮುಖ್ಯ ಆರೋಪಿ ಚೈತ್ರಾ ನಿನ್ನೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆಕೆ ತನಿಖೆ ಮುಂದುವರೆದಿದೆ. ಪೊಲೀಸರು ಈ ಪ್ರಕರಣದ ಗಂಟು ಬಿಡಿಸುತ್ತಿರುವಾಗಲೇ ಆಕೆಯ ಮೇಲೆ ಬ್ರಹ್ಮಾವರ ತಾಲೂಕಿನ ಕೋಟ ಪೊಲೀಸ್‌ ಠಾಣೆಯಲ್ಲಿ ಇನ್ನೊಂದು ಪ್ರಕರಣ ದಾಖಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು