Home ಬೆಂಗಳೂರು ಬಿಡದಿ ಉಪನಗರ: ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದ ಸಚಿವ ಕುಮಾರಸ್ವಾಮಿ

ಬಿಡದಿ ಉಪನಗರ: ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದ ಸಚಿವ ಕುಮಾರಸ್ವಾಮಿ

0

ಬೆಂಗಳೂರು: ಬಿಡದಿ ಉಪನಗರ (Bidadi Township) ಯೋಜನೆಯ ಕುರಿತಾದ ಚರ್ಚೆಯ ದಿನಾಂಕ ಮತ್ತು ಸ್ಥಳವನ್ನು ಬದಲಾಯಿಸುವಂತೆ ಕೋರಿ ಜೂನ್ 22 ರಂದು ತಾವು ಬರೆದಿದ್ದ ಪತ್ರದ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ನೆನಪಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ತಮ್ಮ ಪ್ರವಾಸದ ವೇಳಾಪಟ್ಟಿಯನ್ನು ಹಂಚಿಕೊಂಡಿರುವ ಕುಮಾರಸ್ವಾಮಿ, ರೈತರೊಂದಿಗೆ ಸಂವಾದ ನಡೆಸಲು ತಾವೂ ಜೂನ್ 27 ರಂದು ಬೈರಮಂಗಲದಲ್ಲಿ ಇರಲಟ್ಟಿರುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ, ಯೋಜನೆಯಿಂದ ಸಂತ್ರಸ್ತರಾಗಲಿರುವ ರೈತರ ಕುಂದುಕೊರತೆಗಳನ್ನು ಆಲಿಸಲು ಮುಖ್ಯಮಂತ್ರಿ ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳೊಂದಿಗೆ ಖುದ್ದಾಗಿ ಸ್ಥಳದಲ್ಲಿ ಉಪಸ್ಥಿತರಿರಬೇಕು ಎಂದು ಅವರು ವಿನಂತಿಸಿದ್ದಾರೆ.

“ಸಂತ್ರಸ್ತ ರೈತರ ಸಮ್ಮುಖದಲ್ಲೇ ಈ ಚರ್ಚೆಯನ್ನು ನಡೆಸುವುದು ಸ್ಥಳದಲ್ಲೇ ಸೂಕ್ತ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲು ನೆರವಾಗುತ್ತದೆ,” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ತಾವು ಈ ಹಿಂದೆ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿಗಳ ಕಚೇರಿಯಿಂದ ಯಾವುದೇ ಪ್ರತ್ಯುತ್ತರ ಬಾರದ ಹಿನ್ನೆಲೆಯಲ್ಲಿ ಈ ಜ್ಞಾಪನಾ ಪತ್ರವನ್ನು ಕಳುಹಿಸುತ್ತಿರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

You cannot copy content of this page

Exit mobile version