Saturday, January 24, 2026

ಸತ್ಯ | ನ್ಯಾಯ |ಧರ್ಮ

ಹೆಚ್.ಡಿ ಕುಮಾರಸ್ವಾಮಿಯಿಂದ ನಿರ್ಮಲಾನಂದನಾಥ ಸ್ವಾಮಿಗೆ ಕ್ಷಮೆಯಾಚನೆ

ಮಂಡ್ಯ: ಮಂಡ್ಯದ ವಿಸಿ ಫಾರಂನಲ್ಲಿ ನಡೆದ ಕೃಷಿ ಮೇಳದಲ್ಲಿ ಪಾಲ್ಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮಿಗೆ ಸಾರ್ವಜನಿಕ ಕ್ಷಮೆಯಾಚನೆ ಸಲ್ಲಿಸಿದ್ದಾರೆ.ಹೆಚ್.ಡಿ. ಕುಮಾರಸ್ವಾಮಿ ಅವರು ಹಿಂದೆ ಜಾತಿಯ ಹೆಸರಿನಲ್ಲಿ ಧಾರ್ಮಿಕ ಕ್ಷೇತ್ರವನ್ನು ದುರುಪಯೋಗ ಮಾಡುವುದನ್ನು ವಿರೋಧಿಸಿ ನೀಡಿದ ಹೇಳಿಕೆಗಳಿಂದ ಸ್ವಾಮಿಗೆ ಯಾವುದೇ ರೀತಿಯ ಅಪಮಾನವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

“ನಮ್ಮ ನಿಷ್ಠೆ ಹೃದಯದಲ್ಲಿದೆ, ಅದನ್ನು ಹೊರಗೆ ತೋರಿಸುವ ಅವಶ್ಯಕತೆ ಇಲ್ಲ. ಪರಮಪೂಜ್ಯ ಸ್ವಾಮೀಜಿಗಳಿಗೆ ನನ್ನಿಂದ ಏನಾದರೂ ಅಪಚಾರವಾದಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ” ಎಂದರು.

ತಾವು ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದಾಗ ಮತ್ತು ಅಧಿಕಾರ ಕಳೆದುಕೊಳ್ಳುವ ಸಂದರ್ಭದಲ್ಲಿ ಯಾವುದೇ ಮಠಾಧೀಶರಿಂದ ಸಹಾಯ ಕೇಳದಿದ್ದುದಾಗಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಅವರು ಮಠಾಧೀಶರ ಕೆಲಸ ರಾಜಕಾರಣದಿಂದ ವಿಭಿನ್ನವಾಗಿರಬೇಕು ಎಂದು ಒತ್ತಾಯಿಸಿ, ರಾಜ್ಯದಲ್ಲಿ ನಡೆದ ಜಾತೀಯ ರಾಜಕಾರಣವು ಸಮಾಜದ ನಡುವೆ ಸಂಘರ್ಷ ಮತ್ತು ನಷ್ಟಕ್ಕೆ ಕಾರಣವಾಗುತ್ತದೆ ಎಂದು ಸಭೆಯಲ್ಲಿ ಹೇಳಿದರು.

ಕುಮಾರಸ್ವಾಮಿ ಅವರು “ಇಂತಹ ಸ್ವಾಮಿಗಳು ರಾಜಕೀಯದ ಒಳಗೆ ಬರುವುದಿಲ್ಲ. ಅವರಿಗೆ ಅಗೌರವ ಮಾಡಬಾರದು” ಎಂದು ಹೇಳಿ, ಮಾತನ್ನು ಸ್ಪಷ್ಟಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page