Thursday, May 22, 2025

ಸತ್ಯ | ನ್ಯಾಯ |ಧರ್ಮ

ಮನೆ-ಮನೆಗೆ ತೆರಳಿದ ಆರೋಗ್ಯ ಸಚಿವ: ಆರೋಗ್ಯ ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು

ಬೆಂಗಳೂರು: ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ(ಬುಧವಾರ) ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ವ್ಯಾಪ್ತಿಯ ಕುಂಬಾರಗುಂಡಿ ಬಡಾವಣೆಯಲ್ಲಿ ,ಮನೆ ಮನೆಗೆ ತೆರಳಿ ಡೆಂಗ್ಯೂ ವಿರುದ್ಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್‌ ಗುಂಡೂರಾವ್‌ ಸಾರ್ವಜನಿಕರಿಗೆ ಅರಿವು ಮೂಡಿಸಿದ್ದಾರೆ.

ನೀರಿನ ಘಟಕಗಳು, ನೀರಿನ ಟ್ಯಾಂಕ್, ಮನೆಯಲ್ಲಿನ ಬಿಂದಿಗೆ, ಮನೆಯ ಬಳಿಯ ಹಳೆಯ ಟೈರ್‌ಗಳು ಜೊತೆಗೆ ತೆಂಗಿನ ಚಿಪ್ಪುಗಳಲ್ಲಿ, “ಈಡಿಸ್ ಸೊಳ್ಳೆ”- “ಲಾರ್ವಾ” ಹುಳು ಹುಟ್ಟಲು ಕಾರಣವಾಗುತ್ತದೆ, ಆದ್ದರಿಂದ ಸಾಧ್ಯವಾದಷ್ಟು ಈ ಎಲ್ಲಾ ತಾಣಗಳ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.

ನಗರದಲ್ಲಿ 40% ರಿಂದ 50ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ನಾಗರಿಕರು ಸಹ ಹೆಚ್ಚಿನ ಮುನ್ನೆಚ್ಚರಿಕೆ ‌ ವಹಿಸುವುದು ಅಗತ್ಯವಾಗಿದೆ. ಸ್ವಚ್ಛತೆಯಿಂದ ಡೆಂಗಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ. ಮೊದಲು ನಮ್ಮ ಮನೆ ಸುತ್ತಾಮುತ್ತಾ ಪ್ರದೇಶಗಳು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ತಿಳಿಹೇಳಿದ್ದಾರೆ.

ಈ ಹಿನ್ನಲೆಯಲ್ಲಿ, ಡೆಂಗ್ಯೂ ನಿಯಂತ್ರಣಕ್ಕೆ ನಗರದಲ್ಲಿ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು 700 ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಆರೋಗ್ಯಕ್ಕೆ ನಾವು ಮೊದಲ ಪ್ರಾಮುಖ್ಯ ನೀಡಬೇಕಿದೆ. ಉತ್ತಮ ಆರೋಗ್ಯಕ್ಕೆ ಉತ್ತಮ ವಾತಾವರಣ ನಿರ್ಮಾಣ ಅಗತ್ಯವಿದ್ದು ನಮ್ಮ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page