Tuesday, July 1, 2025

ಸತ್ಯ | ನ್ಯಾಯ |ಧರ್ಮ

ಹಾಸನ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸಾವುಗಳು ; ಇಂದು ಒಂದೇ ದಿನ ನಾಲ್ವರ ಬಲಿ

ಹಾಸನದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಇಂದು ಒಂದೇ ದಿನದಲ್ಲಿ ಮಧ್ಯಾಹ್ನದ ಒಳಗೆ 4 ಸಾವಿನ ಪ್ರಕರಣ ಹೊರಬಿದ್ದಿದೆ. ಇದೀಗ ತಾನೆ ಚನ್ನರಾಯಪಟ್ಟಣ ತಾಲ್ಲೂಕಿನ ಡಿ ಗ್ರೂಪ್ ನೌಕರ ಕುಮಾರ್(53) ಮೃತಪಟ್ಟ ಬಗ್ಗೆ ವರದಿಯಾಗಿದೆ.

ಸಧ್ಯದ ಮಾಹಿತಿಯಂತೆ ಕಳೆದ 40 ದಿನಗಳಲ್ಲಿ ಇಂದಿನವರೆಗೆ ಒಟ್ಟು 22 ಜನ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಅಲ್ಲದೆ ಇಂದು ಒಂದೇ ದಿನ ಜಿಲ್ಲೆಯಲ್ಲಿ ಒಟ್ಟು ನಾಲ್ವರು ಹೃದಯಾಘಾತದಿಂದ ಸಾವನಪ್ಪಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆಯೇ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ (50) ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಆಸ್ಪತ್ರೆಗೆ ಬರುವ ಮೊದಲೇ ಮಹಿಳೆ ಮೃತಪಟ್ಟಿದ್ದಾರೆ.

ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿರುವಾಗಲೇ ಪ್ರಾಧ್ಯಾಪಕ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಮುತ್ತಯ್ಯ (58) ಸಾವನಪ್ಪಿದ್ದಾರೆ.

ಜನರಾಯಪಟ್ಟಣದಲ್ಲಿ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವನ್ನಪ್ಪಿದ್ದಾನೇ. ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ.

ಇದೀಗ ಸಿಕ್ಕ ಮಾಹಿತಿಯಂತೆ ಚನ್ನರಾಯಪಟ್ಟಣ ತಾಲ್ಲೂಕಿನ ಡಿ ಗ್ರೂಪ್ ನೌಕರ ಕುಮಾರ್(53) ಮೃತಪಟ್ಟ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೃದಯಾಘಾತದಿಂದ ಮೃತಪಡುತ್ತಿರುವ ಪ್ರಕರಣ ನನ್ನ ಗಮನಕ್ಕೂ ಬಂದಿದೆ. ಆದಷ್ಟು ಬೇಗ ಈ ಹೃದಯಾಘಾತಕ್ಕೆ ಕಾರಣ ಏನಿರಬಹುದು ಎಂಬುದಕ್ಕೆ ತಜ್ಞರ ಸಮಿತಿ ರಚಿಸಲಾಗುವುದು ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page