ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಒಂದು ಸಾವು, 29 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಮತ್ತು ಮಂಡಿ ಜಿಲ್ಲೆಗಳಿಂದ ದುರಂತದ ಸುದ್ದಿ ಬರುತ್ತಿದೆ. ಇಲ್ಲಿನ ಶಿಮ್ಲಾ ಜಿಲ್ಲೆಯ ರಾಂಪುರ ಪ್ರದೇಶದ ಸಮೇಜ್ ಖಾಡ್ ಪ್ರದೇಶದಲ್ಲಿ ಮೇಘಸ್ಪೋಟ ಉಂಟಾಗಿದೆ. ಇದರೊಂದಿಗೆ, ಮಂಡಿಯ ಪಾಧಾರ್ ಉಪವಿಭಾಗದ ತಾಲ್ತುಖೋಡ್ ಪ್ರದೇಶದಲ್ಲಿ ಮೇಘಸ್ಫೋಟವು ಭಾರಿ ವಿನಾಶವನ್ನು ಉಂಟುಮಾಡಿದೆ.

ಈ ಎರಡೂ ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದಾಗಿ ಒಟ್ಟು 28 ಮಂದಿ ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲಾಗುತ್ತಿದೆ.

ಸುದ್ದಿಗಳ ಪ್ರಕಾರ , ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರಾಮ್‌ಪುರ ಪ್ರದೇಶದ ಸಮೇಜ್ ಖಾಡ್ ಪ್ರದೇಶದಲ್ಲಿ ಗುರುವಾರ ಮೇಘಸ್ಫೋಟ ಸಂಭವಿಸಿದೆ. ಈ ದುರಂತದ ನಂತರ 19 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಎಸ್‌ಡಿಆರ್‌ಎಫ್ ತಂಡವು ಸ್ಥಳಕ್ಕೆ ತೆರಳಿದೆ ಎಂದು ಶಿಮ್ಲಾ ಉಪ ಆಯುಕ್ತ (ಡಿಸಿ) ಅನುಪಮ್ ಕಶ್ಯಪ್ ಹೇಳಿದ್ದಾರೆ.

ಮತ್ತೊಂದೆಡೆ, ಹಿಮಾಚಲ ಪ್ರದೇಶದ ಮಂಡಿಯ ಪಾಧಾರ್ ಉಪವಿಭಾಗದ ತಾಲ್ತುಖೋಡ್‌ನಲ್ಲಿ ಮೇಘಸ್ಫೋಟವಾಗಿದೆ. ಈ ಅಪಘಾತದಲ್ಲಿ 9 ಮಂದಿ ನಾಪತ್ತೆಯಾಗಿದ್ದಾರೆ. ಅದೇ ಸಮಯದಲ್ಲಿ, ಒಬ್ಬ ವ್ಯಕ್ತಿ ಕೂಡ ಸಾವನ್ನಪ್ಪಿದ್ದು, ಅವರ ದೇಹ ದೊರೆತಿದೆ. ಘಟನೆಯಿಂದಾಗಿ ಮನೆಗಳಿಗೂ ಹಾನಿಯಾಗಿದೆ. ಜಿಲ್ಲಾಡಳಿತ ಮತ್ತು ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ತೆರಳಿದೆ ಎಂದು ಮಂಡಿ ಜಿಲ್ಲಾಧಿಕಾರಿ ಅಪೂರ್ವ ದೇವಗನ್ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು