Home ದೆಹಲಿ ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ನಾಯಕರು ಹಸಿರು ನಿಶಾನೆ ನೀಡಬೇಕಿದೆ – ಬಿ.ಕೆ ಹರಿಪ್ರಸಾದ್‌

ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ನಾಯಕರು ಹಸಿರು ನಿಶಾನೆ ನೀಡಬೇಕಿದೆ – ಬಿ.ಕೆ ಹರಿಪ್ರಸಾದ್‌

ನವದೆಹಲಿ: ರಾಜ್ಯದಲ್ಲಿ ಬಹುದಿನಗಳಿಂದ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಗೆ (cabinet expansion) ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಹಸಿರು ನಿಶಾನೆ ತೋರುವ ಸೂಚನೆ ನೀಡಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ವಿಸ್ತೃತ ಚರ್ಚೆ ನಡೆದಿರುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ (B. K. Hariprasad) ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಹೈಕಮಾಂಡ್‌ ನಾಯಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನನ್ನೊಂದಿಗೆ ಚರ್ಚಿಸಿದ್ದಾರೆ ಎಂದಿದ್ದಾರೆ.

ಗುರುವಾರ ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದೇವೆ. ಪರೀಕ್ಷೆ ಮುಗಿದಿದೆ. ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

ನಮ್ಮ ಮುಖ್ಯಮಂತ್ರಿಗಳು ಪಂಚಾಗ, ಜೋತಿಷ್ಯ ನೋಡಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ದಿನಾಂಕ ನಿಗಧಿ ಮಾಡುತ್ತಾರೆ ಎಂದೂ ಹೇಳಿದ್ದಾರೆ.

You cannot copy content of this page

Exit mobile version