ಬೆಂಗಳೂರು : ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಧೀಶರಾಗಿ ಪ್ರಸನ್ನ ಬಾಲಚಂದ್ರ ವರಾಲೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಪಿ.ಬಿ ವರಾಲೆಯವರಿಗೆ ಪ್ರಮಾಣ ವಚನವನ್ನು ಭೋಧಿಸಿದ್ದಾರೆ.
ಕಳೆದ ತಿಂಗಳು ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಕಿಲಿಜಿಯಂ ನ್ಯಾ.ವರಾಲೆ ಅವರನ್ನು ಹೈಕೋರ್ಟ್ ನ್ಯಾ. ಸ್ಥಾನಕ್ಕೆ ಶಿಫಾರಸ್ಸು ಮಾಡಿತ್ತು. ಈ ಮೊದಲು ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದ ಪಿ.ಬಿ ವರಾಲೆಯವರು ಇಂದು ರಾಜಭವನದಲ್ಲಿ ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದ ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ, ಹೈಕೋರ್ಟ್ ನ್ಯಾಯಮೂರ್ತಿಗಳಾದ ಪಿ.ಎಸ್ ದಿನೇಶ್ ಕುಮಾರ್, ಬಿ ವೀರಪ್ಪ, ಆರ್ ದೇವದಾಸ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ವಿ ಗೋಪಾಲಗೌಡ ಮತ್ತು ಇನ್ನಿತರ ನ್ಯಾಯಾಂಗದ ಅಧಿಕಾರಿಗಳು ಉಪಸ್ಥಿತರಿದ್ದರು.