Home ಅಪರಾಧ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ‘ಭಯೋತ್ಪಾಕರ ಸಹೋದರಿ’ ಎಂದ ಬಿಜೆಪಿ ನಾಯಕನ ಮೇಲೆ ಎಫ್ಐಆರ್ ದಾಖಲಿಸಲು...

ಕರ್ನಲ್ ಸೋಫಿಯಾ ಖುರೇಷಿ ಅವರನ್ನು ‘ಭಯೋತ್ಪಾಕರ ಸಹೋದರಿ’ ಎಂದ ಬಿಜೆಪಿ ನಾಯಕನ ಮೇಲೆ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

0

ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ‘ಭಯೋತ್ಪಾದಕರ ಸಹೋದರಿ’ ಎಂಬ ಪದ ಬಳಕೆ ಮಾಡಿದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಷಾ ವಿರುದ್ಧ ದೇಶಾದ್ಯಂತ ಬಾರಿ ಆಕ್ರೋಶ ವ್ಯಕ್ತವಾಗಿದೆ. ಸಧ್ಯ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಮಧ್ಯಪ್ರದೇಶ ಹೈಕೋರ್ಟ್ ಆದೇಶಿಸಿದೆ.

ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಅನುರಾಧಾ ಶುಕ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಯಾವುದೇ ಕೃತ್ಯವನ್ನು ಅಪರಾಧೀಕರಿಸುವ ಬಿಎನ್‌ಎಸ್‌ನ ಸೆಕ್ಷನ್ 152 ರ ಅಡಿಯಲ್ಲಿ ಪ್ರಾಥಮಿಕವಾಗಿ ಅಪರಾಧವನ್ನು ಮಾಡಿದೆ ಎಂದು ತೀರ್ಪು ನೀಡಿದೆ. ಹೀಗಾಗಿ ಸ್ವಯಂಪ್ರೇರಿತ ದೂರು ದಾಖಲಿಸಿ, ಎಫ್ಐಆರ್ ದಾಖಲು ಮಾಡಲು ಸೂಚಿಸಿದೆ.

ಇಸ್ಲಾಂ ಅನುಯಾಯಿಯಾದ ಮಾತ್ರಕ್ಕೆ ಕರ್ನಲ್ ಖುರೇಷಿ ಅವರನ್ನು “ಭಯೋತ್ಪಾದಕರ ಸಹೋದರಿ” ಎಂದು ಅವಹೇಳನ ಮಾಡಿರುವುದು ಪ್ರಾಥಮಿಕವಾಗಿ ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಅಥವಾ ಜಾತಿಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದನ್ನು ಸೂಚಿಸುವುದರ ಅಪರಾಧವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಇಂದು ಸಂಜೆಯೊಳಗೆ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯ ಡಿಜಿಪಿಗೆ ನಿರ್ದೇಶಿಸಿದೆ. ಅಕಸ್ಮಾತ್ ಬಂಧನದ ವೇಳೆ ಡಿಜಿಪಿ ಯಾವುದೇ ತಪ್ಪು ಮಾಡಿದರೆ, ಅವರು ನ್ಯಾಯಾಲಯ ನಿಂದನೆ ಕಾಯ್ದೆಯಡಿಯಲ್ಲಿ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ.

You cannot copy content of this page

Exit mobile version