Thursday, May 29, 2025

ಸತ್ಯ | ನ್ಯಾಯ |ಧರ್ಮ

43 ಕ್ರಿಮಿನಲ್ ಪ್ರಕರಣ ಹಿಂಪಡೆದ ಆದೇಶ ರದ್ದುಗೊಳಿಸಿದ ಹೈಕೋರ್ಟ್; ರಾಜ್ಯ ಸರ್ಕಾರಕ್ಕೆ ಹಿನ್ನಡೆ

43 ಕ್ರಿಮಿನಲ್ ಪ್ರಕರಣ ಹಿಂಪಡೆಯುವ ಉದ್ದೇಶ ಹೊಂದಿದ್ದ ರಾಜ್ಯ ಸರ್ಕಾರದ ನಡೆಗೆ ಬಾರಿ ಹಿನ್ನಡೆಯಾಗಿದೆ. ಸರ್ಕಾರದ ನಡೆಯ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿ, 43 ಕ್ರಿಮಿನಲ್ ಪ್ರಕರಣ ರದ್ದು ಮಾಡಿದ ಆದೇಶವನ್ನು ಹಿಂಪಡೆದಿದೆ.

ಕಳೆದ ವರ್ಷ ಆಗಸ್ಟ್ 15 ರಂದು ಸರ್ಕಾರದ ಆದೇಶದ ಅನ್ವಯ 43 ಕ್ರಿಮಿನಲ್ ಪ್ರಕರಣಗಳನ್ನು ಸರ್ಕಾರ ರದ್ದು ಮಾಡಿ ಆದೇಶಿಸಿತ್ತು. ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಸೇರಿದಂತೆ 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿ, ಆದೇಶ ಹೊರಡಿಸಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬುವವರು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ, ಸರ್ಕಾರದ ಆದೇಶವನ್ನು ರದ್ದು ಮಾಡಿದೆ.

ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬುವವರು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ, ಸರ್ಕಾರದ ಆದೇಶವನ್ನು ರದ್ದು ಮಾಡಿದೆ.

ಈ ವಿಷಯದಲ್ಲಿ ಕಾನೂನು ಇಲಾಖೆ ಹಾಗೂ ರಾಜ್ಯದ ಪ್ರಾಸಿಕ್ಯೂಷನ್ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯು 43 ಪ್ರಕರಣಗಳನ್ನು ಹಿಂಪಡೆಯಲು ಯೋಗ್ಯವಾಗಿಲ್ಲ ಎಂದು ಅಭಿಪ್ರಾಯಪಟ್ಟಿವೆ ಎಂದು ಅವರು ವಾದಿಸಿದರು.

ಇದರ ಹೊರತಾಗಿಯೂ, ರಾಜ್ಯದ ಗೃಹ ಇಲಾಖೆಯು ಅಕ್ಟೋಬರ್ 15, 2024 ರಂದು ಆದೇಶ ಹೊರಡಿಸಿತು, ಗಲಭೆ, ಕೊಲೆ ಯತ್ನ, ಪೊಲೀಸ್ ಅಧಿಕಾರಿಗಳ ಮೇಲಿನ ದಾಳಿ ಮತ್ತು ಕ್ರಿಮಿನಲ್ ಅತಿಕ್ರಮಣದಂತಹ ಗಂಭೀರ ಆರೋಪಗಳನ್ನು ಒಳಗೊಂಡಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸಿಆರ್‌ಪಿಸಿಯ ಸೆಕ್ಷನ್ 321 ರ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ಪ್ರಾಸಿಕ್ಯೂಟರ್‌ಗಳಿಗೆ ನಿರ್ದೇಶಿಸಿತು ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.

ವರದಿಗಳ ಪ್ರಕಾರ , ಹಿಂಪಡೆಯಲು ಪ್ರಸ್ತಾಪಿಸಲಾದ ಇತರ ಪ್ರಕರಣಗಳಲ್ಲಿ ರೈತ ಮುಖಂಡರು ಮತ್ತು ಕನ್ನಡ ಕಾರ್ಯಕರ್ತರ ವಿರುದ್ಧದ ಪ್ರಕರಣಗಳೂ ಸೇರಿವೆ. ಈ ಪ್ರಕರಣಗಳು ಪ್ರಭಾವಿ ವ್ಯಕ್ತಿಗಳು ಮತ್ತು ರಾಜಕಾರಣಿಗಳನ್ನು ಒಳಗೊಂಡಿವೆ ಎಂದು ಅರ್ಜಿದಾರರು ಹೇಳಿದರು, ಇದು ರಾಜ್ಯದ ಉದ್ದೇಶಗಳ ಮೇಲೆ ಮತ್ತಷ್ಟು ಅನುಮಾನವನ್ನು ಉಂಟುಮಾಡುತ್ತದೆ ಎಂದು ಹೈಕೋರ್ಟ್ ಬಲವಾಗಿ ಹೇಳಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page