Wednesday, November 19, 2025

ಸತ್ಯ | ನ್ಯಾಯ |ಧರ್ಮ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಮುಂದಾದ ಸರ್ಕಾರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತುಮಕೂರು ಜಿಲ್ಲೆ ಬಾಲ ಭವನದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬಗ್ಗೆ ಪ್ರಮುಖ ಪ್ರಕಟಣೆ ಮಾಡಿದರು. ಈಗಾಗಲೇ ಅವರಿಗೆ ಗೌರವಧನದ ಹೆಚ್ಚಳ ಮಾಡುವ ಪ್ರಕ್ರಿಯೆ ನಡೆದಿದ್ದು, ಮುಂದಿನ ದಿನಗಳಲ್ಲಿ ಮತ್ತೊಂದು 1000 ರೂಪಾಯಿಯಷ್ಟು ಹೆಚ್ಚಳ ಸಾಧ್ಯತೆ ಇರುವುದಾಗಿ ತಿಳಿಸಿದರು.

ಚುನಾವಣಾ ಕೆಲಸದಿಂದ ಈ ಸಿಬ್ಬಂದಿಯನ್ನು ವಿಮುಕ್ತಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು. ಜಾತಿ ಸಮೀಕ್ಷೆಯಲ್ಲಿನ ಯಶಸ್ವಿ ಸಹಾಯ ಮತ್ತು ಗೃಹಲಕ್ಷ್ಮಿ ಯೋಜನೆ ಜಾತಿ ಸಮೀಕ್ಷೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ಸಹಾಯ ಮಾಡುತ್ತಿರುವುದಕ್ಕೆ ಹೃತ್ಪೂರ್ವಕ ಧನ್ಯವಾದ ತಿಳಿಸಿದರು.

ನವೆಂಬರ್ 28ರಂದು ಬೆಂಗಳೂರಿನಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ ಹಾಗೂ ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ನಡೆಯಲಿವೆ. ಈ ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಪಾಲುದಾರರು ಸಹಕರಿಸಬೇಕಾಗಿದ್ದು, ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಸಚಿವರು ಮನವಿ ಮಾಡಿದರು.

ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆಯಲ್ಲಿ ಬದಲಾವಣೆ
“ಮಂತ್ರಿಯಾದ ಬಳಿಕ ನಮ್ಮ ಇಲಾಖೆಯಲ್ಲಿ ಶಿಸ್ತಿನಿಂದ ಕೆಲಸ ಮಾಡುತ್ತಿರುವೆವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಗೃಹಲಕ್ಷ್ಮಿ ಯೋಜನೆ ಮೂಲಕ ಈಗ ನಮ್ಮ ಇಲಾಖೆ ಮನೆ ಮನೆಗೆ ಹೆಸರಾಗಿದ್ದು, ಮೊದಲು ಕೆಡಿಪಿ ಸಭೆಗಳಲ್ಲಿ ಕ್ರಿಯಾಶೀಲತೆ ಕಡಿಮೆಇತ್ತು; ಆದರೆ ಇದೀಗ ಮೊದಲ ಸ್ಥಾನದಲ್ಲಿದೆ.

“ತುಮಕೂರು ಜಿಲ್ಲೆಯಲ್ಲಿ ಎಫ್ ಆರ್ ಎಸ್ ಸಿಸ್ಟಮ್ ಶೇಕಡಾ 99ರಷ್ಟು ಜಾರಿಗೆ ತಂದಿರುವ ಯಶಸ್ಸಿಗೆ ಹೆಚ್ಚುವರಿ ಪ್ರಶಂಸೆ ನೀಡಿದ ಹೇಳಿದರು.

ಸಾಮಾಜಿಕ ಬದ್ಧತೆ ಮತ್ತು ಅಂತರಂಗದ ಸೇವೆ:
ಸಚಿವೆ ತಮ್ಮ ಇಲಾಖೆಯನ್ನು ಮಹಿಳೆಯರಿಗೆ ವಿಶೇಷ ಮಾನವೀಯತೆ ಮತ್ತು ಅನುಕಂಪದಿಂದ ಕಾರ್ಯನಿರ್ವಹಿಸುವ ಸ್ಥಳ ಎಂದು ಪರಿಶೀಲಿಸಿದರು. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಹಾಗೂ ಅನುದಾನ ವೃದ್ಧಿ ಆಗಿದ್ದು, ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಸಹಕಾರ ಸಂಘಗಳಿಗೆ ತುಮಕೂರಿನಿಂದ ನಾಲ್ಕು ಷೇರುದಾರರನ್ನು ನೋಂದಾಯಿಸಲು ಕರೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page