Monday, February 16, 2026

ಸತ್ಯ | ನ್ಯಾಯ |ಧರ್ಮ

ಜನರು ಬಯಸಿದ್ದನ್ನು ನೀಡದಿದ್ದರೆ ಮತಗಳು ಹೇಗೆ ಬರುತ್ತವೆ?: ರಾಹುಲ್ ಗಾಂಧಿಗೆ ಅಮಿತ್ ಶಾ ಪ್ರಶ್ನೆ

ಲೋಕಸಭೆಯಲ್ಲಿ ಕಾಂಗ್ರೆಸ್ ಏಕೆ ಸತತವಾಗಿ ಸೋಲುತ್ತಿದೆ ಎಂಬ ರಾಹುಲ್ ಗಾಂಧಿಯವರ ಪ್ರಶ್ನೆಗೆ ಅಮಿತ್ ಶಾ ತಿರುಗೇಟು ನೀಡಿದ್ದಾರೆ. ಜನರು ಬಯಸುವ ವಿಷಯಗಳನ್ನು ಕಾಂಗ್ರೆಸ್ ಪಕ್ಷವು ವಿರೋಧಿಸುತ್ತಿರುವುದೇ ಅದರ ಸೋಲಿಗೆ ಮುಖ್ಯ ಕಾರಣ ಎಂದು ಅವರು ವಿಶ್ಲೇಷಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ನಿರ್ಮಾಣ, ಆರ್ಟಿಕಲ್ 370 ರದ್ದು, ಸರ್ಜಿಕಲ್ ಸ್ಟ್ರೈಕ್, ತ್ರಿವಳಿ ತಲಾಖ್ ನಿಷೇಧ ಮತ್ತು ಅಕ್ರಮ ವಲಸಿಗರನ್ನು ಹೊರಹಾಕುವಂತಹ ನಿರ್ಧಾರಗಳನ್ನು ಕಾಂಗ್ರೆಸ್ ವಿರೋಧಿಸಿದೆ. ಜನರು ಆಶಿಸುವ ಈ ವಿಚಾರಗಳನ್ನು ವಿರೋಧಿಸಿದರೆ ಅವರು ಹೇಗೆ ಮತ ಹಾಕುತ್ತಾರೆ ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

ಈ ಸರಳ ತರ್ಕವನ್ನು ರಾಹುಲ್ ಗಾಂಧಿ ಅವರಿಗೆ ಅರ್ಥಮಾಡಿಸಲು ಸಾಧ್ಯವಿಲ್ಲ ಮತ್ತು ಅವರ ಪಕ್ಷದ ನಾಯಕರೂ ಈ ಸತ್ಯವನ್ನು ಅವರಿಗೆ ಹೇಳುತ್ತಿಲ್ಲ ಎಂದು ಶಾ ವ್ಯಂಗ್ಯವಾಡಿದ್ದಾರೆ.

ಮುಂಬರುವ ತಮಿಳುನಾಡು, ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆಗಳು ಮಾತ್ರವಲ್ಲದೆ, 2029ರ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಸೋಲನ್ನು ಅನುಭವಿಸಲಿದೆ ಮತ್ತು ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೆ ವಿಜಯ ಸಾಧಿಸಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಬಿಜೆಪಿಯ ಸಿದ್ಧಾಂತಗಳೊಂದಿಗೆ ದೇಶದ ಜನರು ಬೆರೆತು ಹೋಗಿದ್ದಾರೆ. ಜನ ಸಾಮಾನ್ಯರ ಆಕಾಂಕ್ಷೆಗಳನ್ನು ಈಡೇರಿಸುತ್ತಿರುವುದರಿಂದಲೇ ಬಿಜೆಪಿ ಸತತವಾಗಿ ಗೆಲುವು ಸಾಧಿಸುತ್ತಿದೆ ಎಂದು ಅಮಿತ್ ಶಾ ಪ್ರತಿಪಾದಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page