Home ಬೆಂಗಳೂರು ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ, ಸಾನು ನೋವು ಹೆಚ್ಚಳ – ಅಂಕಿ ಏನು ಹೇಳುತ್ತಿವೆ ?

ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ, ಸಾನು ನೋವು ಹೆಚ್ಚಳ – ಅಂಕಿ ಏನು ಹೇಳುತ್ತಿವೆ ?

0

ಬೆಂಗಳೂರು : ಕಾಡು ಪ್ರಾಣಿಗಳ (Wild animals) ಅಟ್ಟಹಾಸ ಮಿತಿಮೀರಿದೆ. ಕಾಡಂಚಿನ ಪ್ರದೇಶದಲ್ಲಿ (Forest) ವನ್ಯಜೀವಿ  ಹಾಗೂ ಮಾನವನ ಸಂಘರ್ಷ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದ್ದು, ಅನೇಕ ಜೀವಗಳು ಬಲಿಯಾಗಿದೆ.

ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ ಗಣನೀಯವಾಗಿ ಹೆಚ್ಚಿದ್ದು, 2022 ರಿಂದ 2025 ರ ನವೆಂಬರ್‌ವರೆಗೆ 203 ಜನರ ಸಾವಿಗೆ ಕಾರಣವಾಗಿದೆ. ಚಾಮರಾಜನಗರ, ಕೊಡಗು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಕಾಡುಪ್ರಾಣಿ ದಾಳಿಗಳು ಹೆಚ್ಚಾಗಿವೆ. ಕಳೆದ ನಾಲ್ಕು ವರ್ಷಗಳಿಂದ ಈ ಜಿಲ್ಲೆಗಳಲ್ಲಿ ಕಾಡು ಪ್ರಾಣಿಗಳ ದಾಳಿ ಹೆಚ್ಚಿದ್ದು, ಸಾವಿಗೀಡಾದವರ ಅಂಕಿ ಅಂಶಗಳ ಪಟ್ಟಿ ಬಹಿರಂಗವಾಗಿದೆ.

ಸುಮಾರು 60% ರಷ್ಟು ಸಾವುಗಳು ಮಾನವ-ವನ್ಯಜೀವಿ ಸಂಘರ್ಷಣೆಯಿಂದಲೇ ಸಂಭವಿಸಿವೆ ಎಂದು ಹೇಳಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿರುವಂತೆ, 2022 ರಿಂದ 2025 ರವರೆಗೆ ರಾಜ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷದಲ್ಲಿ 203 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ 2022-23 ರಲ್ಲಿ 58 ಮಂದಿ, 2023-24 ರಲ್ಲಿ 65, 2024-25 ರಲ್ಲಿ 46 ಸೇರಿದಂತೆ 2025 ರ ನವೆಂಬರ್​ವರೆಗೆ 34 ಜನರು ಸಾವನ್ನಪ್ಪಿದ್ದಾರೆ.ಲ್ ಎಂಬ ಅಂಕಿ ಅಂಶ ನೀಡಲಾಗಿದೆ.

ವಾಸಸ್ಥಾನಗಳ ವಿಂಗಡಣೆ, ಕುಗ್ಗುತ್ತಿರುವ ಅರಣ್ಯ ಕಾರಿಡಾರ್‌ಗಳು, ಕೃಷಿ ವಿಸ್ತರಣೆ ಮತ್ತು ವನ್ಯಜೀವಿ ವಾಸಸ್ಥಾನಗಳಲ್ಲಿ ಮಾನವ ಅತಿಕ್ರಮಣದಂತಹ ಕಾರಣದಿಂದ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದೆ
ಎಂಬ ವಿಶ್ಲೇಷಣೆ ಕೇಳಿಬಂದಿದೆ.

You cannot copy content of this page

Exit mobile version