ಲೋಕಾಯುಕ್ತ ಇಲಾಖೆಯ ಪುನರ್ ಸ್ಥಾಪನೆಯ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಭ್ರಷ್ಟರನ್ನು ಸೆರೆ ಹಿಡಿದಿದ್ದಾರೆ. ಮಲ್ಲೇಶ್ವರಂನಲ್ಲಿ ಇರುವ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಮತ್ತು ಅವರ ಆಪ್ತ ಸಹಾಯಕರನ್ನು ಖಚಿತ ಮಾಹಿತಿ ಮೇರೆಗೆ ಬಂಧಿಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಮಂಜಯ್ಯ ಮತ್ತು ಶಂಕರ ನಾರಾಯಣ್ ಒಳಗೊಂಡ ತಂಡ ದಾಳಿ ಮಾಡಿದೆ. ಕಾರ್ಯಾಚರಣೆ ವೇಳೆ ನಾಲ್ಕು ಲಕ್ಷದ ಹಣದೊಂದಿಗೆ ಭ್ರಷ್ಟ ಅಧಿಕಾರಿಗಳು ಸಿಕ್ಕಿ ಬಿದ್ದಿದ್ದಾರೆ.
ಖಾತೆ ಬದಲಾವಣೆ ಸಂಬಂಧ ದೂರುದಾರರು ಅಧಿಕಾರಿಗಳ ಭೇಟಿ ನಂತರ ಹಣಕ್ಕೆ ಬೇಡಿಕೆ ಇಟ್ಟದ್ದು ತಿಳಿದು ಬಂದಿದೆ. ನಂತರ ಖಚಿತ ಮಾಹಿತಿ ಮತ್ತು ಸಾಕ್ಷಾಧಾರಗಳ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ.
ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಸ್ಥಾಪನೆ ನಂತರ ನಡೆದ ಮೊದಲ ದಾಳಿ ಇದಾಗಿದ್ದು, ಲೋಕಾಯುಕ್ತ ಅಧಿಕಾರಿಗಳಿಗೆ ಪ್ರಶಂಸೆ ಸಿಕ್ಕಿದೆ.