Friday, June 14, 2024

ಸತ್ಯ | ನ್ಯಾಯ |ಧರ್ಮ

ಪತಿ, ಮಗನ ಬಂಧನದ ನಂತರ ಮಹಿಳೆ ಆತ್ಮಹತ್ಯೆ; ಜೈಲಿನಲ್ಲಿದ್ದ ಗಂಡನಿಗೆ ಹಾರ್ಟ್‌ ಅಟ್ಯಾಕ್

ದಾರುಣ ಘಟನೆಯೊಂದರಲ್ಲಿ, ಕೊಲೆ ಆರೋಪದ ಮೇಲೆ ಪತಿ ಮತ್ತು ಮಗನನ್ನು ಬಂಧಿಸಿದ ನಂತರ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಕರ್ನಾಟಕದ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು: ಕೊಲೆ ಆರೋಪದ ಮೇಲೆ ಪತಿ ಮತ್ತು ಮಗನನ್ನು ಬಂಧಿಸಿದ ನಂತರ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ನಂತರ ಪತ್ನಿಯ ಸಾವಿನ ಸುದ್ದಿ ತಿಳಿದ ಪತಿ ಜೈಲಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು 35 ವರ್ಷದ ಇಂದ್ರಾಣಿ ಎಂದು ಗುರುತಿಸಲಾಗಿದೆ. ಆಕೆಯ ಪತಿ ಸಾಮ್ರಾಟ್ ಜೈಲಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೈಸೂರಿನ ವಿದ್ಯಾನಗರದಲ್ಲಿ ಬಾಲರಾಜ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮ್ರಾಟ್ ಮತ್ತು ಆತನ ಪುತ್ರ ತೇಜಸ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಸ್, ಆತನ ತಂದೆ ಸಾಮ್ರಾಟ್ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ಜೈಲಿಗೆ ಕಳುಹಿಸಲಾಗಿತ್ತು. ಘಟನೆಯ ನಂತರ ತೇಜಸ್‌ನ ತಾಯಿ ಇಂದ್ರಾಣಿ ಖಿನ್ನತೆಗೆ ಒಳಗಾಗಿದ್ದು, ನೋವು ತಾಳಲಾರದೆ ಭಾನುವಾರ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ತಿಳಿದ ನಂತರ ಜೈಲು ಸೇರಿದ್ದ ಪತಿ ಸಾಮ್ರಾಟ್ ಆಘಾತಗೊಂಡು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು