Home ಬೆಂಗಳೂರು ಇ.ಡಿಗೆ ನನ್ನ ವಿರುದ್ಧ ದೂರು ಕೊಟ್ಟಿದ್ದು ಯಾರೆಂದು ಚೆನ್ನಾಗಿ ಗೊತ್ತಿದೆ – ಸತೀಶ್ ಜಾರಕಿಹೊಳಿ

ಇ.ಡಿಗೆ ನನ್ನ ವಿರುದ್ಧ ದೂರು ಕೊಟ್ಟಿದ್ದು ಯಾರೆಂದು ಚೆನ್ನಾಗಿ ಗೊತ್ತಿದೆ – ಸತೀಶ್ ಜಾರಕಿಹೊಳಿ

0

ಬೆಂಗಳೂರು : ಜಾರಿ ನಿರ್ದೇಶನಾಲಯದ (ED) ತನಿಖೆಗೆ ಒಳಗಾಗಿರುವ ಸಚಿವ ಸತೀಶ್ ಜಾರಕಿಹೊಳಿ (Satish jarakiholi) ತಮ್ಮ ವಿರುದ್ಧ ದೂರು ನೀಡಿದ ವ್ಯಕ್ತಿಯ ಸಂಪೂರ್ಣ ಮಾಹಿತಿ ತಮಗೆ ತಿಳಿದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ರಹಸ್ಯ ಮಾಹಿತಿಯನ್ನು ಈಗಾಗಲೇ ಮುಖ್ಯಮಂತ್ರಿಗಳ (CM) ಗಮನಕ್ಕೆ ತರಲಾಗಿದ್ದು, ಮುಂದಿನ ಹಂತದ ಪರಿಶೀಲನೆಗೆ ವಹಿಸಲಾಗಿದೆ.

ಇನ್ನು ದೂರುದಾರರು ಕಾಂಗ್ರೆಸ್ ಪಕ್ಷದವರೇ ಅಥವಾ ವಿರೋಧ ಪಕ್ಷದವರೇ ಎಂಬ ಗೊಂದಲಕ್ಕೆ ಉತ್ತರಿಸಿದ ಅವರು, ಆ ವ್ಯಕ್ತಿಗೆ ಕಾಂಗ್ರೆಸ್ ಜೊತೆ ಸಂಪರ್ಕವಿದ್ದರೂ ಮತದಾರರ ಪಟ್ಟಿಯ ಪ್ರಕಾರ ಅವರು ಬಿಜೆಪಿಗೆ ಸೇರಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ಯಾವುದೇ ಸ್ಪಷ್ಟ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಆರೋಪ ಮಾಡುವ ಮತ್ತು ದೂರು ನೀಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಈ ದೂರಿನ ಹಿಂದೆ ಯಾವುದೇ ಉದ್ದೇಶವಿದ್ದರೂ ಅದನ್ನು ಕಾನೂನಾತ್ಮಕವಾಗಿ ಎದುರಿಸಲಾಗುವುದು. ಸೂಕ್ತ ದಾಖಲೆಗಳು ಮತ್ತು ಸತ್ಯಾಂಶಗಳೊಂದಿಗೆ ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ಸಚಿವರು ತಿಳಿಸಿದ್ದಾರೆ. ಇನ್ನು ದೂರು ಕೊಟ್ಟವರ ಬಗ್ಗೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳೇ ತೆಗೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

You cannot copy content of this page

Exit mobile version