ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಗಣೇಶ ಚತುರ್ಥಿಯನ್ನು ಕೋವಿಡ್-19 ನ ಯಾವುದೇ ನಿರ್ಬಂಧಗಳಿಲ್ಲದೆ ಆಚರಿಸಬಹುದು ಎಂದು ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರತೀ ವರ್ಷದಂತೆ ಈ ವರ್ಷವು ಪ್ಲಾಸ್ಟಿಕ್ ಅಥವಾ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಮಾಡಿದ ಯಾವುದೇ ವಿಗ್ರಹಗಳನ್ನು ಆಚರಣೆಗೆ ಅನುಮತಿಸಲಾಗುವುದಿಲ್ಲ, ಪರಿಸರದ ಹಿತ ದೃಷ್ಟಿಯಿಂದ ಕೇವಲ ಮಣ್ಣಿನ ವಿಗ್ರಹಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.