Sunday, June 22, 2025

ಸತ್ಯ | ನ್ಯಾಯ |ಧರ್ಮ

ಈ ವರ್ಷ ಕೋವಿಡ್‌ ನಿರ್ಬಂಧವಿಲ್ಲದೆ ಗಣೇಶ ಚತುರ್ಥಿ ಆಚರಣೆ ಮಾಡಬಹುದು : ಆರ್‌ ಅಶೋಕ್‌

ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಗಣೇಶ ಚತುರ್ಥಿಯನ್ನು ಕೋವಿಡ್-19 ನ ಯಾವುದೇ ನಿರ್ಬಂಧಗಳಿಲ್ಲದೆ ಆಚರಿಸಬಹುದು ಎಂದು ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರತೀ ವರ್ಷದಂತೆ ಈ ವರ್ಷವು ಪ್ಲಾಸ್ಟಿಕ್ ಅಥವಾ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿದ ಯಾವುದೇ ವಿಗ್ರಹಗಳನ್ನು ಆಚರಣೆಗೆ ಅನುಮತಿಸಲಾಗುವುದಿಲ್ಲ, ಪರಿಸರದ ಹಿತ ದೃಷ್ಟಿಯಿಂದ  ಕೇವಲ ಮಣ್ಣಿನ ವಿಗ್ರಹಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು. 
  

Related Articles

ಇತ್ತೀಚಿನ ಸುದ್ದಿಗಳು

You cannot copy content of this page