ಬೆಂಗಳೂರು: ಸಾಮಾಜಿಕ ಚಿಂತಕ, ಚಿತ್ರನಟ ಪ್ರಕಾಶ್ ರಾಜ್ ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇಂದು ತಮ್ಮ ಮತ ಚಲಾಯಿಸಿದ ನಂತರ ಎಕ್ಸ್ ಪೋಸ್ಟ್ ನಲ್ಲಿ ಎಲ್ಲರೂ ಮತದಾನ ಮಾಡುವಂತೆ ವಿನಂತಿಸಿ ವೀಡಿಯೋ ಸಂದೇಶವೊಂದನ್ನು ಫೋಸ್ಟ್ ಮಾಡಿದ್ದಾರೆ.
“ನಾನು ಬದಲಾವಣೆಗೆ ಮತ್ತು ದ್ವೇಷದ ವಿರುದ್ಧ ಮತ ನೀಡಿದ್ದೇನೆ. ಸಂಸತ್ತಿನಲ್ಲಿ ನನ್ನ ದನಿಯಾಗಬಲ್ಲರೆಂದು ನಾನು ನಂಬುವ ಪ್ರತಿನಿಧಿಗೆ ನಾನು ಮತ ಹಾಕಿದ್ದೇನೆ. ದಯವಿಟ್ಟು ಹೋಗಿ ನೀವು ಮತದಾನದ ಹಕ್ಕನ್ನು ಚಲಾಯಿಸಿ. ಬದಲಾವಣೆಗೆ ನಿಮ್ಮಕೊಡುಗೆಯೂ ಇರಲಿ, ಪ್ರೀತಿಯಿಂದ ನನ್ನ ಮನವಿ,” ಎಂದು ಅವರು ತಮ್ಮ ವೀಡಿಯೋ ಸಂದೇಶದಲ್ಲಿ ವಿನಂತಿಸಿಕೊಂಡಿದ್ದೇನೆ.
ವೀಡಿಯೋಗೆ ನೀಡಿದ ಶೀರ್ಷಿಕೆಯಲ್ಲಿ ಅವರು “ನಾನು ಮತದಾನ ಮಾಡಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ ಜಸ್ಟ್ಆಸ್ಕಿಂಗ್, ಸೇವ್ ಡೆಮಾಕ್ರೆಸಿ ಸೇವ್ ಇಂಡಿಯಾ” ಎಂದು ಅವರು ಹ್ಯಾಸ್ ಟ್ಯಾಗ್ ಹಾಕಿದ್ದಾರೆ.
ಮತ ಚಲಾಯಿಸಿದ ನಂತರ ಮಾಧ್ಯಮವೊಂದರ ಜೊತೆ ಮಾತನಾಡಿದ ಪ್ರಕಾಶ್ ರಾಜ್, ನನ್ನ ಮತ ನನ್ನ ಹಕ್ಕಿಗೆ ಸಂಬಂಧಿಸಿದೆ, ಯಾರು ನನ್ನನ್ನು ಪ್ರತಿನಿಧಿಸಬೇಕೆಂದು, ಯಾರು ಸಂಸತ್ತಿನಲ್ಲಿ ನನ್ನ ದನಿಯಾಗಬೇಕೆಂದು ಆರಿಸುವ ಅಧಿಕಾರ ನನ್ನದು. ಕಳೆದೊಂದು ದಶಕದಲ್ಲಿ ನಾವು ನೋಡಿರುವ ದ್ವೇಷ ಮತ್ತು ದೇಶವನ್ನು ಇಬ್ಬಾಗ ಮಾಡಿ ನೋಡುವ ರಾಜಕಾರಣದಿಂದ ಬೇಸರ ಬಂದಿತ್ತು. ನೀವು ನಂಬಿಕೆಯಿರಿಸಿರುವ ಅಭ್ಯರ್ಥಿಗೆ ಮತ ನೀಡಿ. ನಾನು ನಂಬಿಕೆ ಇರಿಸಿದ ಅಭ್ಯರ್ಥಿಗೆ ಹಾಗು ಅವರು ಬದಲಾವಣೆಗೆ ಮತ ನೀಡಿದ್ದೇನೆ ಎಂದು ಅವರು ತಿಳಿಸಿದರು.