Home ದೇಶ ನಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ: ಕುನಾಲ್‌ ಕಾಮ್ರಾ‌

ನಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ: ಕುನಾಲ್‌ ಕಾಮ್ರಾ‌

0

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕುರಿತು ಕಮೆಡಿಯನ್ ಕುನಾಲ್ ಕಾಮ್ರಾ ಮಾಡಿದ ತಮಾಷೆ ಭಾರಿ ಕೋಲಾಹಲಕ್ಕೆ ಕಾರಣವಾಗುತ್ತಿದೆ. ಮಹಾರಾಷ್ಟ್ರದ ಶಿವಸೇನಾ ಕಾರ್ಯಕರ್ತರು ಈಗಾಗಲೇ ಮುಂಬೈನ ಸ್ಟುಡಿಯೋ ಮತ್ತು ಕ್ಲಬ್ ಮೇಲೆ ದಾಳಿ ಮಾಡಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ.
ಶಿವಸೇನಾ ಕಾರ್ಯಕರ್ತರು ಕುನಾಲ್ ವಿರುದ್ಧ ದೂರು ಕೂಡ ದಾಖಲಿಸಿದ್ದಾರೆ. ದಾಳಿಯಲ್ಲಿ ಭಾಗಿಯಾಗಿರುವ ಶಿವಸೇನಾ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ವಿವಾದಕ್ಕೆ ಕುನಾಲ್ ಕಾಮ್ರಾ ಇತ್ತೀಚೆಗೆ ಪ್ರತಿಕ್ರಿಯಿಸಿದ್ದಾರೆ. ತಮ್ಮ ಹೇಳಿಕೆಗಳ ಬಗ್ಗೆ ಯಾವುದೇ ವಿಷಾದವಿಲ್ಲ ಎಂದು ಕುನಾಲ್ ಕಮ್ರಾ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ. ಮುಂಬೈ ಪೊಲೀಸರು ಸೋಮವಾರ ಮಧ್ಯಾಹ್ನ ಇದನ್ನು ದೃಢಪಡಿಸಿದ್ದಾರೆ. ಕುನಾಲ್ ಕಾಮ್ರಾ ಪ್ರಸ್ತುತ ತಮಿಳುನಾಡಿನಲ್ಲಿದ್ದಾರೆ. ಮಹಾರಾಷ್ಟ್ರದಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಕುನಾಲ್ ಕಾಮ್ರಾ ಅವರನ್ನು ಸಂಪರ್ಕಿಸಿದ್ದರು. ಆದರೆ ಅವರು ತಮ್ಮ ಹೇಳಿಕೆಗೆ ಈ ವಿಷಾದ ವ್ಯಕ್ತಪಡಿಸಿಲ್ಲ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ.

ವಿರೋಧ ಪಕ್ಷಗಳು ಮಾತನಾಡಲು ಹಣ ನೀಡುತ್ತಿವೆ ಎಂಬ ವದಂತಿಗಳನ್ನು ಕುನಾಲ್ ತಳ್ಳಿಹಾಕಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸಬೇಕೆಂದು ಕುನಾಲ್ ಒತ್ತಾಯಿಸಿದ್ದಾರೆ. ನ್ಯಾಯಾಲಯಗಳು ಕೇಳಿದರೆ ಮಾತ್ರ ಕ್ಷಮೆಯಾಚಿಸುವುದಾಗಿ ಕುನಾಲ್ ಘೋಷಿಸಿದ್ದಾರೆ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ.

You cannot copy content of this page

Exit mobile version