ಹಾಸನ : ತಾಲೂಕಿನ ದೂಮಗೆರೆ ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ವೇಳೆ ಸಂಭವಿಸಿದ ಬಂಡೆ ಸ್ಪೋಟದಲ್ಲಿ ಓರ್ವ ಸಾವನಪ್ಪಿ ಹಲವರಿಗೆ ಗಂಭೀರ ಗಾಯಗಳಾದ ಘಟನೆ ತಡರಾತ್ರಿ ಸಂಭವಿಸಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಐಜಿಪಿ ಬೋರಲಿಂಗಯ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ದೂಮಗೆರೆ ಗ್ರಾಮದಲ್ಲಿ ಹಾಸನ ಮೂಲದ ಬಂಡೆ ದೇವರಾಜ್ ಎಂಬುವವರಿಗೆ ಸೇರಿದ ಕ್ವಾರಿಯಲ್ಲಿ ಈ ಅವಘಡ ನಡೆದಿದ್ದು ಐವರು ಗಾಯಾಳುಗಳ ಪೈಕಿ ನಾಲ್ವರನ್ನು ಹಾಸನಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿ ಇನ್ನು ಮತ್ತೊಬ್ಬರನ್ನು ಬೆಂಗಳೂರಿಗೆ ರವಾನಿಸಲಾಗಿದೆ ಎಂದರು. ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಂಡೆ ಸ್ಫೋಟಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ. ಘಟನೆಗೆ ಸಂಬAಧಿಸಿದAತೆ ಈಗಾಗಲೇ ಇಬ್ಬರೂ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ಮುಂದುವರೆದಿದೆ. ಸ್ಥಳಕ್ಕೆ ಎಸ್.ಎಫ್.ಎಲ್ ತಂಡ ಕೋಡ ಭೇಟಿ ನೀಡಿ ಮಾಹಿತಿ ಕಲೆಯಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ವಿಷಯ ತಿಳಿದ ತಕ್ಷಣವೇ ಗುರುವಾರ ರಾತ್ರಿ 12:30ರ ಸಮಯದಲ್ಲಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಎಸ್ಪಿ ಮೊಹಮ್ಮದ್ ಸುಜಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ವೇಳೆ ತಮಿಳುನಾಡು ಮೂಲದ ಮಣಿ ಎಂಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಪ್ರಕರಣವನ್ನು ಮುಚ್ಚಿ ಹಾಕುವ ಸಲುವಾಗಿ ಆತನ ಮೃತ ದೇಹವನ್ನು ರವಾನಿಸಲಾಗಿತ್ತು. ಆದರೆ ಇದೀಗ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಕೆಲ ದಿನಗಳಲ್ಲೆ ನಡೆದ ಘಟನೆ ಬಗ್ಗೆ ಸತ್ಯಾಮಶ ಹೊರ ಬರುವುದಾಗಿ ವಿಶ್ವಾಸವ್ಯಕ್ತಪಡಿಸಿದರು.