Monday, June 30, 2025

ಸತ್ಯ | ನ್ಯಾಯ |ಧರ್ಮ

ಅಕ್ರಮ ಫೋನ್‌ ಕದ್ದಾಲಿಕೆ ಪ್ರಕರಣ: ಮೂವರ ಮೇಲೆ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ

ನವದೆಹಲಿ: ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ರೂಸ್ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದೆ.

ಪ್ರಕರಣದ ಹಿನ್ನಲೆ, ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ಆಫ್ ಇಂಡಿಯಾ ಲಿಮಿಟೆಡ್(ಎನ್‌ಎಸ್‌ಇ)ನ ಮಾಜಿ ಮುಖ್ಯಸ್ಥ ಚಿತ್ರಾ ರಾಮಕೃಷ್ಣ, ರವಿ ನಾರಾಯಣ್ ಮತ್ತು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಎನ್‌ಎಸ್‌ಇ ಮಾಜಿ ಮುಖ್ಯಸ್ಥ ರವಿ ನಾರಾಯಣ್ ಅವರನ್ನು ಎರಡು ದಿನಗಳ ಬಂಧನಕ್ಕೆ ಒಳಪಡಿಸಿದ್ದು, ವಿನಿಮಯ ಕೇಂದ್ರದ ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮಂಗಳವಾರ ಅವರನ್ನು ಬಂಧಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page