Home ಬೆಂಗಳೂರು ಹವಾಮಾನ ಇಲಾಖೆಯಿಂದ ಕರ್ನಾಟಕದ ಒಂಬತ್ತು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

ಹವಾಮಾನ ಇಲಾಖೆಯಿಂದ ಕರ್ನಾಟಕದ ಒಂಬತ್ತು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

0

ಬೆಂಗಳೂರು: ನೈಋತ್ಯ ಮುಂಗಾರು ಇನ್ನೆರಡು ದಿನಗಳಲ್ಲಿ ಕರ್ನಾಟಕದಿಂದ ಹಿಂದೆ ಸರಿಯಲಿದ್ದು, ದಕ್ಷಿಣ ಒಳ ಕರ್ನಾಟಕದಲ್ಲಿ ಈಶಾನ್ಯ ಮುಂಗಾರು ಆರಂಭಕ್ಕೆ ಅನುಕೂಲಕರ ವಾತಾವರಣವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈಶಾನ್ಯ ಮುಂಗಾರು ಪ್ರಾರಂಭವಾಗುವುದರೊಂದಿಗೆ, ಅಕ್ಟೋಬರ್ 16 ಮತ್ತು 17ರಂದು ದಕ್ಷಿಣ ಕರ್ನಾಟಕದ ಒಳನಾಡಿನ ಒಂಬತ್ತು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಜೊತೆಗೆ, ವ್ಯಾಪಕವಾದ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿದೆ.

ಆ ಜಿಲ್ಲೆಗಳೆಂದರೆ ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಹಾಸನ ಮತ್ತು ಕೊಡಗು.

ಅಕ್ಟೋಬರ್ 14ರಿಂದ 18ರವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಪ್ರತ್ಯೇಕ ಭಾರೀ ಮಳೆಯ ನಿರೀಕ್ಷೆಯಿದ್ದರೆ, ರಾಜ್ಯದ ಹಲವೆಡೆ ವ್ಯಾಪಕವಾದ ಭಾರೀ ಮಳೆಯಾಗುವ ನಿರೀಕ್ಷೆಯಿದೆ, ನಂತರ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗಲಿದೆ.

You cannot copy content of this page

Exit mobile version