Thursday, June 19, 2025

ಸತ್ಯ | ನ್ಯಾಯ |ಧರ್ಮ

ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಹಿಂದಿ ಹೇರಿಕೆ: ನೆಟ್ಟಿಗರ ಆಕ್ಷೇಪ

ಶಿವಮೊಗ್ಗ,ಅಗಸ್ಟ್.31: ಇಂದು ವಿಮಾನ ಸಂಚಾರ ಸೇವೆಯನ್ನು ಆರಂಭಿಸಿರುವ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೂಚನಾ ಫಲಕದಲ್ಲಿ ಕನ್ನಡವನ್ನು ಕಡೆಗಣಿಸಿ ಹಿಂದಿಯನ್ನು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಟ್ವೀಟರ್‌ನಲ್ಲಿ ಚರ್ಚೆಯಾಗುತ್ತಿದ್ದು ಜನರು ಅಸಮಾಧನ ತೋರಿಸಿದ್ದಾರೆ. ಈ ಫಲಕದ ಫೋಟೋವನ್ನು ಹಂಚಿ ಹಿಂದಿ ಹೇರಿಕೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ in ಕರ್ನಾಟಕ ಎಂಬ ಹ್ಯಾಷ್‌ ಟ್ಯಾಗ್‌ ಬಳಸಿ ಈ ಅಸಮಧಾನವನ್ನು ವ್ಯಕ್ತಪಡಿಸಲಾಗಿದೆ.

“ಇದು ಯಾವುದೋ ಹಿಂದಿ ರಾಜ್ಯವಲ್ಲ ಇದು ಕರ್ನಾಟಕ.. ಇಲ್ಲಿ ಹಿಂದಿ ಅವಶ್ಯಕತೆ ಇಲ್ಲ. ಇದನ್ನು ತೆಗೆಸಿ ಕನ್ನಡದಲ್ಲಿ ಹಾಕಿಸಿ. ಕರ್ನಾಟಕ ಸರ್ಕಾರವೇ ನಿರ್ವಹಿಸಲಿರುವ ನಾಳೆಯಿಂದ ಶಿವಮೊಗ್ಗ – ಬೆಂಗಳೂರು ನಡುವೆ ವಿಮಾನ ಸೇವೆಗಳು ಪ್ರಾರಂಭವಾಗುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಮಯ.” ಎಂದು ಟ್ವೀಟರ್‌ ಖಾತೆಯಿಂದ #ಹಿಂದಿಹೇರಿಕೆ
ನಲ್ಲಿ ಟ್ವೀಟ್‌ ಮಾಡಲಾಗಿದೆ.

ಈ ಟ್ವೀಟ್‌ಗೆ ಸಚಿವ ಬಿ ಎಂ ಪಾಟೀಲ್‌ ಪ್ರತಿಕ್ರಿಯೆ ನೀಡಿದ್ದು “ಇದು ನನ್ನ ಗಮನಕ್ಕೆ ಬಂದಿರಲಿಲ್ಲ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ಕುರಿತು ಮಾತನಾಡುವೆ,” ಎಂದು ರೀಟ್ವೀಟ್‌ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page