Saturday, June 15, 2024

ಸತ್ಯ | ನ್ಯಾಯ |ಧರ್ಮ

ಭಾರತ, ದಕ್ಷಿಣ ಆಫ್ರಿಕಾ ಏಕದಿನ ಸರಣಿ: ದೀಪಕ್ ಚಹಾರ್ ಬದಲಿಗೆ ವಾಷಿಂಗ್ಟನ್ ಸುಂದರ್‌ಗೆ ಸ್ಥಾನ

ನವದೆಹಲಿ: ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ವಿರುದ್ಧದ ODI ಸರಣಿಯ ಉಳಿದ ಎರೆಡು ಪಂದ್ಯಗಳಿಗೆ ದೀಪಕ್ ಚಹಾರ್ ಬದಲಿಗೆ ವಾಷಿಂಗ್ಟನ್ ಸುಂದರ್ ಅವರನ್ನು ಹೆಸರಿಸಿದೆ.

ಭಾರತ, ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ-20 ಪಂದ್ಯದ ಸಮಯದಲ್ಲಿ ದೀಪಕ್‌ ಚಹಾರ್‌ ಅವರಿಗೆ ಬೆನ್ನಿನಲ್ಲಿ ಬಿಗಿತ ಉಂಟಾಗಿದ್ದು, ಬೆನ್ನುನೋವಿನಿಂದ ಬಳಲುತ್ತಿರುವ ಪರಿಣಾಮ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಈ ಕುರಿತು ಪ್ರಕಟಣೆ ಹೊರಡಿಸಿದೆ.

ಈ ಹಿನ್ನಲೆ ದೀಪಕ್‌ ಚಹಾರ್‌ ಬದಲು ವಾಷಿಂಗ್ಟನ್‌ ಸುಂದರ್‌ ತಂಡದಲ್ಲಿ ಸ್ಥಾನಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ಸೂಚಿಸಿದೆ.

ಚಹಾರ್ ಅವರು ಬೆನ್ನುನೋವಿನ ಸಮಸ್ಸೆ ಕುರಿತು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ವರದಿ ಸಲ್ಲಿಸಲಿದ್ದಾರೆ. ಈ ಹಿನ್ನಲೆ ಅಲ್ಲಿನ ವೈದ್ಯಕೀಯ ತಂಡವು ಮೇಲ್ವಿಚಾರಣೆ ನಡೆಸಲಿದೆ ಎಂದು ಬಿಸಿಸಿಐ ತಿಳಿಸಿದೆ.

ಬಿಸಿಸಿಐ ಸೂಚಿಸಿರುವ ಪ್ರಕಟಣೆಯಲ್ಲಿ ಭಾರತ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್. ಸಿರಾಜ್, ವಾಷಿಂಗ್ಟನ್ ಸುಂದರ್

Related Articles

ಇತ್ತೀಚಿನ ಸುದ್ದಿಗಳು