ವಂದೇ ಮಾತರಂ ಹಾಡಲು ನಿರಾಕರಣೆ: ಇಬ್ಬರು ಕಾರ್ಪೊರೇಟರ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಇಂದೋರ್: ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆಯ ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಗೀತೆ ‘ವಂದೇ ಮಾತರಂ’ ಹಾಡಲು ನಿರಾಕರಿಸಿದ ಇಬ್ಬರು ಕಾರ್ಪೊರೇಟರ್‌ಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಏಪ್ರಿಲ್ 8ರಂದು ನಡೆದ ಘಟನೆಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಫೌಜಿಯಾ ಶೇಖ್ ಆಲಿಮ್ ಮತ್ತು ಪಕ್ಷೇತರವಾಗಿ ಗೆದ್ದು ನಂತರ ಕಾಂಗ್ರೆಸ್ ಸೇರಿದ್ದ ರೂಬಿನಾ ಇಕ್ಬಾಲ್ ಖಾನ್ ಅವರು ವಂದೇ ಮಾತರಂ ಗೀತೆಯನ್ನು ಹಾಡಲು ನಿರಾಕರಿಸಿದ್ದರು. ಇಸ್ಲಾಮಿಕ್ ನಂಬಿಕೆಗಳ ಪ್ರಕಾರ ತಮಗೆ ಈ ಗೀತೆಯನ್ನು ಹಾಡಲು ಸಾಧ್ಯವಿಲ್ಲ ಎಂದು ಫೌಜಿಯಾ ಹೇಳಿಕೆ ನೀಡಿದ್ದರು.

ಪೊಲೀಸ್ ಕ್ರಮ: ರಾಷ್ಟ್ರಗೀತೆಗೆ ಅಪಮಾನ ಮಾಡಲಾಗಿದೆ ಎಂಬ ಆರೋಪದ ಮೇಲೆ ಇಬ್ಬರ ವಿರುದ್ಧ ಬಿ.ಜೆ. ರೋಡ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 196ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈಗಾಗಲೇ ಇಬ್ಬರಿಗೂ ಸಮನ್ಸ್ ನೀಡಿ ಕಳೆದ ಎರಡು ದಿನಗಳಿಂದ ವಿಚಾರಣೆ ನಡೆಸಿದ್ದಾರೆ ಮತ್ತು ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನು ಗಂಭೀರ ಸ್ವರೂಪದ ಅಪರಾಧ (Cognizable Offense) ಎಂದು ಪರಿಗಣಿಸಿ ಎಫ್‌ಐಆರ್ ದಾಖಲಿಸಲಾಗಿದ್ದು, ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು