ಚಿಕ್ಕಮಗಳೂರು : ಕುದುವರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್ಗಳನ್ನು ಮೇ 1 ರಿಂದ ಜಾರಿಗೆ ಬರುವಂತೆ ಚಾರಣಿಗರಿಗೆ, ವೀಕ್ಷಣೆ ಸಲುವಾಗಿ ಮುಕ್ತಗೊಳಿಸಲಾಗಿದೆ.
ಪ್ರವಾಸಿಗರು ಆನ್ಲೈನ್ aranyavihara.karnataka.gov.in ಮೂಲಕ ಕಾಯ್ದಿರಬಹುದು ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಪ್ರಕಟಣೆ ತಿಳಿಸಿದೆ. ಅಂದಹಾಗೆ, ಕಾಡ್ಗಿಚ್ಚು, ಬೆಂಕಿಯ ಕಾರಣದಿಂದ ಚಾರಣಿಗರ ಕ್ಷೇಮಕ್ಕಾಗಿ ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಚಾರಣವನ್ನು ನಿರ್ಬಂಧಿಸಲಾಗಿತ್ತು.