Tuesday, September 23, 2025

ಸತ್ಯ | ನ್ಯಾಯ |ಧರ್ಮ

ಹಿಂದೂ ಸಮಾಜ ಒಡೆಯಲು ಸರ್ಕಾರ ಯತ್ನಿಸುತ್ತಿರುವುದು ದುರ್ದೈವ: ವಿಜಯೇಂದ್ರ

ಶಿವಮೊಗ್ಗ: ಜಾತಿಗಣತಿ ವಿಷಯ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದೆ. ಆದರೆ, ಮುಖ್ಯಮಂತ್ರಿಗಳು ಅಭಿವೃದ್ಧಿ ಕಾರ್ಯಗಳನ್ನು ಬಿಟ್ಟು ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕುತ್ತಿರುವುದು ದುರ್ದೈವ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಾತಿಗಣತಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಆದರೂ ಸರ್ಕಾರ ಆಟವಾಡುತ್ತಿರುವುದನ್ನು ನಾವು ಖಂಡಿಸುತ್ತೇವೆ. ದಸರಾ ವಿಷಯದಲ್ಲಿಯೂ ಮುಖ್ಯಮಂತ್ರಿಗಳು ಹುಚ್ಚಾಟ ನಡೆಸಿದ್ದು, ರಾಜ್ಯದ ಜನರು ಇದನ್ನು ಮಾತನಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯ ಹೊರತುಪಡಿಸಿ, ದೇಶದ ಬೇರೆಲ್ಲೂ ಹಿಂದೂ ಹಬ್ಬಗಳ ಆಚರಣೆ ವಿಷಯದಲ್ಲಿ ಗೊಂದಲವಿಲ್ಲ. ಇದಕ್ಕೆ ಮುಖ್ಯಮಂತ್ರಿಗಳೇ ನೇರ ಕಾರಣ. ದಸರಾವನ್ನು ಯಾರು ಬೇಕಾದರೂ ಉದ್ಘಾಟಿಸಲಿ, ಆದರೆ ರಾಜ್ಯದ ಜನರಿಗೆ ಮುಖ್ಯಮಂತ್ರಿ ಮತ್ತು ಸರ್ಕಾರದ ಮನಸ್ಥಿತಿ ಅರ್ಥವಾಗಿದೆ” ಎಂದು ಕಿಡಿಕಾರಿದರು.

ಜಿಎಸ್‌ಟಿ ಸುಧಾರಣೆ ಮತ್ತು ಶರಾವತಿ ಯೋಜನೆ

ಜಿಎಸ್‌ಟಿ ಸುಧಾರಣೆ: “ಜಿಎಸ್‌ಟಿ ಸುಧಾರಣೆಯ ಪರಿಣಾಮಗಳ ಬಗ್ಗೆ ನಾವು ಜನರಿಗೆ ತಿಳಿಸುತ್ತಿದ್ದೇವೆ. ಈ ಐತಿಹಾಸಿಕ ಸುಧಾರಣೆ ಭಾರತದ ಅಭಿವೃದ್ಧಿಗೆ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ವಿಕಸಿತ ಭಾರತದ ಕನಸು ನನಸಾಗಲು ಇದು ಬಲ ತುಂಬಲಿದೆ” ಎಂದು ವಿಜಯೇಂದ್ರ ಹೇಳಿದರು. ಪ್ರಾರಂಭದಲ್ಲಿ ಕೆಲವು ಗೊಂದಲಗಳು ಉಂಟಾಗಬಹುದು, ಆದರೆ ನಂತರ ಎಲ್ಲವೂ ಸರಿಯಾಗಲಿದೆ ಎಂದು ಅವರು ಭರವಸೆ ನೀಡಿದರು.

ಶರಾವತಿ ಯೋಜನೆ: “ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಬಗ್ಗೆ ಎಲ್ಲರೂ ಸೇರಿ ಚರ್ಚೆ ಮಾಡಬೇಕು. ಶಾಸಕರು ಮತ್ತು ಸಂಸದರು ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡ ನಂತರವೇ ಪಕ್ಷವು ತನ್ನ ತೀರ್ಮಾನ ಪ್ರಕಟಿಸಲಿದೆ” ಎಂದು ಅವರು ಸ್ಪಷ್ಟಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page