Thursday, June 19, 2025

ಸತ್ಯ | ನ್ಯಾಯ |ಧರ್ಮ

ಐಟಿಬಿಪಿ ಬಸ್‌ ಅಪಘಾತ ಆರು ಜನ ಯೋಧರು ಸಾವು

ಜಮ್ಮು&ಕಾಶ್ಮೀರ: ಮಂಗಳವಾರ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಚಂದನ್ವಾರಿ-ಪಹಲ್ಗಾಮ್ ಪ್ರದೇಶದಲ್ಲಿ 39 ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ವಾಹನವು ಅಪಘಾತಕ್ಕೀಡಾಗಿ ಆರು ಮಂದಿ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಐಟಿಬಿಪಿ ಪೊಲೀಸ್, ವಾಹನದ ಬ್ರೇಕ್ ವಿಫಲವಾದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನದಿಯ ತಳಕ್ಕೆ ಬಿದ್ದಿದೆ. ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ದಾವಿಸಿದ ಐಟಿಬಿಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಗಾಯಗೊಂಡಿದ್ದ ಸಿಬ್ಬಂದಿಗಳನ್ನು ಏರ್ಲಿಫ್ಟ್ ಮಾಡಿ ಚಿಕಿತ್ಸೆಗಾಗಿ ಶ್ರೀನಗರದ ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದರು. 

Related Articles

ಇತ್ತೀಚಿನ ಸುದ್ದಿಗಳು

You cannot copy content of this page