Saturday, June 29, 2024

ಸತ್ಯ | ನ್ಯಾಯ |ಧರ್ಮ

ಜಾನಪದ ಪರಿಷತ್ ಅಧ್ಯಕ್ಷರಾಗಿ ಹಿ ಶಿ. ರಾಮಚಂದ್ರೇ ಗೌಡ ಆಯ್ಕೆ.

 

ರಾಮನಗರ: ಪ್ರೊ. ಹಿ ಶಿ. ರಾಮಚಂದ್ರೇ ಗೌಡರು ಕರ್ನಾಟಕ ಜಾನಪದ ಪರಿಷತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಿಕಟಪೂರ್ವ ಅಧ್ಯಕ್ಷ ಟಿ. ತಿಮ್ಮೇ ಗೌಡರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ನಡೆದ ಪರಿಷತ್ತಿನ 122ನೇ ಆಡಳಿತ ಮಂಡಳಿ ಸಭೆಯಲ್ಲಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ವಿಷಯವನ್ನು ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ತಿಳಿಸಿದ್ದಾರೆ.ಇದೇ 22ರಂದು ಹೊಸ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯಲಿದೆ.

 ಹಿ ಶಿ ರಾಮಚಂದ್ರೇ ಗೌಡರು  ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಜಾನಪದ ಪ್ರಾಧ್ಯಾಪಕರಾಗಿದ್ದಾರೆ. 2001ರಿಂದ 2004ರ ವರೆಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. 25 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು