Tuesday, January 27, 2026

ಸತ್ಯ | ನ್ಯಾಯ |ಧರ್ಮ

ಮರಳಿ ಮನೆಗೆ : ಬಿಜೆಪಿ ಸೇರ್ಪಡೆಯಾದ ಗಣಿದಣಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧ ಕಿಡಿಕಾರಿ ಹೊರ ರಾಜಕೀಯ ಪಕ್ಷ ಹುಟ್ಟು ಹಾಕಿದ್ದ ಗಣಿದಣಿ ಗಾಲಿ ಜನಾರ್ಧನ ರೆಡ್ಡಿ, ಈಗ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮೋದಿ ಜಪ ಮಾಡುತ್ತಿದ್ದ ಜನಾರ್ಧನ ರೆಡ್ಡಿ ನಿರೀಕ್ಷೆಯಂತೆ ಬಿಜೆಪಿ ಪಕ್ಷ ಸೇರಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಜನಾರ್ದನ ರೆಡ್ಡಿಗೆ ಬಿಜೆಪಿ ಪಕ್ಷದ ಬಾವುಟ ನೀಡಿ ವಿಜಯೇಂದ್ರ ಸ್ವಾಗತ ಕೋರಿದರು. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page