ʼಜನೋತ್ಸವʼ ರದ್ದು : ಸಿ ಎಂ ಬೊಮ್ಮಾಯಿ

ಬೆಂಗಳೂರು: ಆರ್.ಟಿ ನಗರದ ಖಾಸಗಿ ನಿವಾಸದಲ್ಲಿ ಮಧ್ಯರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜುಲೈ 28ರಂದು  ಆಯೋಜಿಸಿದ್ದ ʼಜನೋತ್ಸವʼ ಸಾಧನಾ ಸಮಾವೇಶ  ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಾಳೆಯದಿನ (ಗುರುವಾರ) ಪಕ್ಷದ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಹಾಗೂ ಸರಕಾರದ ವತಿಯಿಂದ ವಿಧಾನಸೌಧದಲ್ಲಿ ನಿಗದಿಯಾಗಿದ್ದ ಜನೋತ್ಸವ ಸಾಧನಾ ಸಮಾವೇಶ ಕಾರ್ಯಕ್ರಮ ರದ್ದುಗೊಳಿಸಲಾಗಿದ್ದು, ಪ್ರವೀಣ್ ಹತ್ಯೆಯ ಕಾರಣ ತೀವ್ರ ನೋವಾಗಿದೆ ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನುಈ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವವಿಸುವವರಿದ್ದರು. ಆದರೆ ಈ ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ ಜೆ.ಪಿ.ನಡ್ಡಾ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಸಚಿವ ಅರುಣ್‌ ಸಿಂಗ್‌ ಕೂಡಾ ಕರ್ನಾಟಕ ರಾಜ್ಯ ಭೇಟಿ ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು