ಜೆಡಿಎಸ್ ಪಕ್ಷದ ನಾಯಕರ ಇಬ್ಬಗೆಯ ನಿಲುವುಗಳು ಹಾಗೂ ಜಾತ್ಯತೀತ ತತ್ವಗಳ ವಿರೋಧಿ ನಡೆಯ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರೆ ನಜ್ಮಾ ನಜೀರ್ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಜೆಡಿಎಸ್ ಪಕ್ಷ ಯಾವಾಗ ಕೋಮುವಾದಿ ಬಿಜೆಪಿ ಜೊತೆಗೆ ಕೈ ಜೋಡಿಸಿತೋ ಆಗಿಂದಲೇ ಮಾನಸಿಕವಾಗಿ ಜೆಡಿಎಸ್ ನಿಂದ ಹೊರಬಂದಿದ್ದ ನಜ್ಮಾ ನಜೀರ್ ಜೆಡಿಎಸ್ ಪಕ್ಷದ ಯಾವ ವೇದಿಕೆಯಲ್ಲೂ ಕಾಣಿಸಿಕೊಂಡಿರಲಿಲ್ಲ. ತೀರಾ ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲೂ ಜೆಡಿಎಸ್ ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ಹೊರಹಾಕಿದ್ದ ನಜ್ಮಾ ನಜೀರ್ ಪಕ್ಷದ ನಾಯಕರ ನಿಲುವುಗಳ ಬಗ್ಗೆ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದರು.
ಸಧ್ಯ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಇನ್ನೂ ಹಲವು ಮುಖಂಡರು ಜೆಡಿಎಸ್ ತೊರೆಯಬಹುದಾದ ಮುನ್ಸೂಚನೆ ಎದುರಾಗಿದೆ.