Friday, June 20, 2025

ಸತ್ಯ | ನ್ಯಾಯ |ಧರ್ಮ

ಜೂ.21 ರಂದು ಕೆ.ಎನ್. ರಾಜಣ್ಣರವರ 75ನೇ ಜನ್ಮದಿನದ ಅಮೃತ ಮಹೋತ್ಸವ – ಟಿ.ಆರ್. ವಿಜಯಕುಮಾರ್

ಹಾಸನ : ಸಹಕಾರ ಸಚಿವ ಕೆ.ಎನ್. ರಾಜಣ್ಣರವರ 75ನೇ ಜನ್ಮದಿನದ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವು 2025 ಜೂನ್ 21 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ತುಮಕೂರು ಬಿ.ಹೆಚ್. ರಸ್ತೆಯ ಕಾಲೇಜು ಜೂನಿಯರ್ ಮೈದಾನದಲ್ಲಿ ಹಮ್ಮಿಕೊಂಡಿರುವುದಾಗಿ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್. ವಿಜಯಕುಮಾರ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಕಲ್ಪತರು ನಾಡು ತುಮಕೂರು ಜಿಲ್ಲೆಯ ರೈತರು ಸೇರಿದಂತೆ, ಸಾಮಾಜಿಕ, ಸಹಕಾರ ವಲಯದ ಸಮಗ್ರ ಅಭಿವೃದ್ಧಿಗೆ ಬದ್ಧತೆಯಿಂದ ತೊಡಗಿಸಿಕೊಂಡಿರುವ ಜನಪ್ರಿಯ ನಾಯಕ, ಸಹಕಾರ ರಂಗದ ಪ್ರತಿಷ್ಠಿತ ‘ಸಹಕಾರ ರತ್ನ’ ಪುರಸ್ಕೃತರು, ಕರ್ನಾಟಕ ಸರ್ಕಾರದ ಜನಪ್ರಿಯ ಸಹಕಾರ ಸಚಿವರಾದ ಶ್ರೀ ಕೆ.ಎನ್. ರಾಜಣ್ಣನರವರು 75ನೇ ವರ್ಷಕ್ಕೆ ಕಾಲಿರಿಸಿದ್ದಾರೆ.


ವಿಧಾನ ಪರಿಷತ್ತಿನ ಸದಸ್ಯರಾಗಿ, ಬೆಳ್ಳಾವಿ ಶಾಸಕರಾಗಿ, ಪ್ರಸ್ತುತ ಎರಡನೇ ಅವಧಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಕೆ.ಎನ್. ರಾಜಣ್ಣ ರವರು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾಗಿ, ಹಾಲಿ ನಿರ್ದೇಶಕರಾಗಿ ಮತ್ತು ತುಮಕೂರು ಡಿಸಿಸಿ ಬ್ಯಾಂಕಿನಲ್ಲಿ ಕಳೆದ 3 ದಶಕಗಳಿಂದ ಅಧ್ಯಕ್ಷರಾಗಿ ಜಿಲ್ಲೆಯ ರೈತರ ಹಿತೈಷಿಯಾಗಿ ಅತ್ಯುತ್ತಮ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದರು. ನೇರ ನಡೆ ನುಡಿಯ ಕೆ.ಎನ್.ರಾಜಣ್ಣ ರವರು ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ರೈತರ, ಅಬಲರ, ಶೋಷಿತರ ಹಾಗೂ ಎಲ್ಲಾ ಜಾತಿಯಲ್ಲಿರುವ ಬಡವರ ಏಳಿಗೆಗೆ ನಿರಂತರ ಶ್ರಮಿಸುತ್ತಿರುವ ಓರ್ವ ಸಹಕಾರಿ. ಶ್ರೀಮತಿ ಇಂದಿರಾ ಗಾಂಧಿ, ಶ್ರೀ ದೇವರಾಜ ಅರಸು, ಶ್ರೀ ಬಂಗಾರಪ್ಪ ಮತ್ತು ಪ್ರಚಲಿತ ರಾಜಕಾರಣಿ ಶ್ರೀ ಸಿದ್ದರಾಮಯ್ಯ ಇವರುಗಳ ಆದರ್ಶದಂತೆ ಸಮಾಜ ಸೇವೆ ಹಾಗೂ ಗುಣಮಟ್ಟದ ವಿದ್ಯಾವಂತರನ್ನು ಮತ್ತು ಸಮಾಜದ ಬಗ್ಗೆ ಕಳಕಳಿ ಇರುವ ಯುವ ನಾಯಕರನ್ನು ಸೃಷ್ಟಿಸುವಲ್ಲಿ ಹೆಚ್ಚು ಶ್ರಮಿಸುತ್ತಿದ್ದಾರೆ. ಅನುಭವಿ ಸಹಕಾರಿ ಮುಖಂಡರಾಗಿ, ಪ್ರಸ್ತುತ ಜನಪ್ರಿಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರದಲ್ಲಿ ಸಹಕಾರ ಸಚಿವರಾಗಿ ಇಲಾಖೆಯ, ಸಹಕಾರ ಕ್ಷೇತ್ರದ ಬಲವರ್ಧನೆಗೆ ತಮ್ಮ ದೂರದೃಷ್ಟಿ ಚಿಂತನೆಗಳೊಂದಿಗೆ ಹಲವು ಸಾಮಾಜಿಕ-ಆರ್ಥಿಕ ಬೆಳವಣಿಗೆಗೆ ಕಂಕಣ ಬದ್ಧರಾಗಿದ್ದಾರೆ ಎಂದು ಹೇಳಿದರು.


ಕೆ.ಎನ್. ರಾಜಣ್ಣರವರ ಕಳೆದ 50 ವರ್ಷಗಳ ಸಾಮಾಜಿಕ, ಸಹಕಾರ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಗುರುತಿಸಿ, ಅವರ ಬದುಕಿನ ಸಾರ್ಥಕತೆಯ 75ನೇ ಜನ್ಮದಿನದ ಅಂಗವಾಗಿ ತುಮಕೂರು ಜಿಲ್ಲೆಯ ಆತ್ಮೀಯ ಗೆಳೆಯರು, ಅಭಿಮಾನಿಗಳು, ಹಿತೈಷಿಗಳು ಶ್ರೀ ಕೆ.ಎನ್. ರಾಜಣ್ಣ ರವರನ್ನು ಸಾರ್ವಜನಿಕವಾಗಿ ಗೌರವಿಸಿ, ಅಭಿನಂದಿಸಲು ತೀರ್ಮಾನಿಸಿ, “ಕೆ.ಎನ್.ಆರ್. ಅಭಿನಂದನಾ ಗ್ರಂಥ” ಬಿಡುಗಡೆಗೊಳಿಸಲು ಉತ್ಸುಕರಾಗಿದ್ದಾರೆ. ದಿನಾಂಕ: ದಿನಾಂಕ: 21-06-2025 ರಂದು ತುಮಕೂರು ನಗರದ ಬಿ.ಎಚ್. ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಏರ್ಪಡಿಸಿದ್ದಾರೆ ಎಂದರು. ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು, ಗೃಹವ ಸಚಿವರಾದ ಡಾ. ಜಿ. ಪರಮೇಶ್ರ‍್ರವರು, ಕೇಂದ್ರ ಸಹಾಯಕ ರೈಲ್ವೇ ಮತ್ತು ಜಲಶಕ್ತಿ ಸಚಿವರಾದ ವಿ. ಸೋಮಣ್ಣರವರು, ಜಿಲ್ಲೆಯು ಹಿರಿಯ ನಾಯಕರು ಸೇರಿದಂತೆ ಸಚಿವರು, ಶಾಸಕರು, ಸಹಕಾರಿ ಮುಖಂಡರುಗಳು, ಗಣ್ಯರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


ದಿನಾಂಕ: 21-06-2025 ರಂದು ಏರ್ಪಡಿಸಿರುವ “ಕೆ.ಎನ್.ಆರ್. ಅಭಿನಂದನಾ ಗ್ರಂಥ” ಬಿಡುಗಡೆ ಸಮಾರಂಭಕ್ಕೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿ ಸವಿನಯದ ಪ್ರೀತಿ ಪೂರ್ವಕ ಆತ್ಮೀಯ ಆಮಂತ್ರಣದ ನೀಡುತ್ತಿದ್ದೇವೆ. ಬನ್ನಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಚಳುವಳಿ ಜಂಠಿ ರಾಜ್ಯ ಸಂಚಾಲಕ ಜಗದೀಶ್ ಚೌಡಳ್ಳಿ, ಜೈಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್, ವಾಲ್ಮೀಕಿ ಸಂಘದ ಜಿಲ್ಲಾಧ್ಯಕ್ಷ ಎನ್.ವೈ. ಶ್ರೀನಿವಾಸ್, ವಾಲ್ಮೀಕಿ ಸಮಾಜದ ನಾಯಕ ಶಿವಪ್ಪನಾಯಕ್ ಇತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page