Wednesday, April 30, 2025

ಸತ್ಯ | ನ್ಯಾಯ |ಧರ್ಮ

ಮೇ 14ರಂದು ನೂತನ ಸಿಜೆಐ ಆಗಿ ನ್ಯಾಯಮೂರ್ತಿ ಗವಾಯಿ ಅವರಿಂದ ಅಧಿಕಾರ ಸ್ವೀಕಾರ

ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಭಾರತದ ಹೊಸ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ನೇಮಿಸಿದ್ದಾರೆ.

ಮೇ 14ರಂದು ರಾಷ್ಟ್ರಪತಿಗಳು ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಸ್ತುತ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ ಮೇ 13 ರಂದು ನಿವೃತ್ತರಾಗಲಿದ್ದಾರೆ.

ರಾಷ್ಟ್ರಪತಿಗಳು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ಗವಾಯಿ ಅವರನ್ನು 52ನೇ ಸಿಜೆಐ ಆಗಿ ನೇಮಿಸಲಾಯಿತು. ಅವರು ಮೇ 24, 2019ರಿಂದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಹಲವಾರು ಸಾಂವಿಧಾನಿಕ ಪೀಠಗಳ ಸದಸ್ಯರಾಗಿ ಐತಿಹಾಸಿಕ ತೀರ್ಪುಗಳನ್ನು ನೀಡಿದ್ದಾರೆ.

ಅವರು ಆರು ತಿಂಗಳ ಕಾಲ ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದು, ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page