Friday, June 14, 2024

ಸತ್ಯ | ನ್ಯಾಯ |ಧರ್ಮ

ಕಲಾ ಸಾಮ್ರಾಟ್ ಅರ್ಪಿಸುವ ಎಸ್ ನಾರಾಯಣ್ ಪುತ್ರನ ಫಿಲ್ಮ್ ಅಕಾಡೆಮಿ

ಕಲಾ ಸಾಮ್ರಾಟ್ ಎಸ್ ನಾರಾಯಣ್ ಪುತ್ರ ಪವನ್ ಎಸ್ ನಾರಾಯಣ್ ನೇತೃತ್ವದಲ್ಲಿ “ಕಲಾಸಾಮ್ರಾಟ್ ಫಿಲ್ಮ್ ಅಕಾಡೆಮಿ” ಆರಂಭವಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ ಈ ನೂತನ ಫಿಲ್ಮ್ ಅಕಾಡೆಮಿಯನ್ನು ಉದ್ಘಾಟಿಸಿದರು. ಹಿರಿಯ ನಟರಾದ ಮುಖ್ಯಮಂತ್ರಿ ಚಂದ್ರು, ಸುಂದರರಾಜ್, ವಿ.ಮನೋಹರ್, ಎಂ.ಎನ್ ಸುರೇಶ್, ನಾಯಕ ಆದಿತ್ಯ ಹಾಗೂ ನಾಯಕಿ ಅದಿತಿ ಪ್ರಭುದೇವ ಸೇರಿದಂತೆ ಅನೇಕ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಾರಾಯಣ್ ಅವರು ನನ್ನನ್ನು ಚೆನ್ನೈನಲ್ಲಿ ಭೇಟಿಯಾಗಿ, ಅವರ ವೃತ್ತಿಜೀವನ ಆರಂಭಿಸಿದರು. ಕೆಲಸದ ಮೇಲೆ ಅವರಿಗಿರುವ ಶ್ರದ್ಧೆಯಿಂದ ಬಹಳ ಎತ್ತರಕ್ಕೆ ಬೆಳೆದಿದ್ದಾರೆ. ಅವರ ಮಗ ಈಗ ಫಿಲ್ಮ್ ಅಕಾಡೆಮಿ ಆರಂಭಿಸಿದ್ದಾರೆ. ಪವನ್ ಅವರ ನೂತನ ಪ್ರಯತ್ನಕ್ಕೆ ಒಳ್ಳೆಯದಾಗಲಿ ಎಂದು ಹಿರಿಯ ನಿರ್ದೇಶಕ ಭಾರ್ಗವ ಹಾರೈಸಿದರು.

ಮುಖ್ಯಮಂತ್ರಿ ಚಂದ್ರು, ಸುಂದರರಾಜ್ ಸೇರಿದಂತೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು “ಕಲಾ ಸಾಮ್ರಾಟ್ ಫಿಲ್ಮ್ ಅಕಾಡೆಮಿ”ಗೆ ಶುಭ ಕೋರಿದರು.

ನನ್ನ ಗುರುಗಳಾದ ಭಾರ್ಗವ ಅವರು ಈ ಫಿಲ್ಮ್ ಅಕಾಡೆಮಿ ಉದ್ಘಾಟಿಸಿದ್ದು ನನಗೆ ಖುಷಿ ತಂದಿದೆ. ನನ್ನ ಮಗ ಪವನ್  ನನ್ನ ಜೊತೆಯಿದ್ದು ಸಾಕಷ್ಟು ಅನುಭವ ಪಡೆದುಕೊಂಡಿದ್ದಾನೆ.‌ “ಕಲಾಸಾಮ್ರಾಟ್ ಫಿಲ್ಮ್ ಅಕಾಡೆಮಿ” ಕುರಿತು ನನ್ನ ಬಳಿ ಪವನ್ ಹೇಳಿದಾಗ, “ಕಲಾ ಸಾಮ್ರಾಟ್” ಎಂಬ ಹೆಸರಿಟ್ಟಿದ್ದಿ. ಆ ಹೆಸರಿಗೆ ಕೆಟ್ಟ ಹೆಸರು ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಿನ್ನದು.  ಏಕೆಂದರೆ ಎಸ್ ನಾರಾಯಣ್ ಅನ್ನೋದು ನನ್ನ ತಂದೆಯಿಟ್ಟ ಹೆಸರು. “ಕಲಾ ಸಾಮ್ರಾಟ್” ಜನ ಕೊಟ್ಟಿದ್ದು. ಆ ಹೆಸರಿಗೆ ಏನು ಆಗಬಾರದು ಎಂದು ಹೇಳಿದ್ದೇನೆ. ನಟನೆ, ನಿರ್ದೇಶನ ಹಾಗೂ ಚಲನಚಿತ್ರದ ಹಲವಾರು ವಿಭಾಗಗಳಲ್ಲಿ ತರಬೇತಿಯನ್ನು “ಕಲಾಸಾಮ್ರಾಟ್ ಫಿಲ್ಮ್ ಅಕಾಡೆಮಿ”ಯಲ್ಲಿ ನೀಡಲಾಗುವುದು. ಅನುಭವಿ ಕಲಾವಿದರು ಹಾಗೂ ತಂತ್ರಜ್ಞರು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳಿಗೆ ಹಂಚಲಿದ್ದಾರೆ. ಮುಖ್ಯಮಂತ್ರಿ ಚಂದ್ರು ಅವರು ಹೇಳಿದಂತೆ ಥಿಯೇಟರ್ ಮುಂದೆ ಕಟೌಟ್ ನಿಲ್ಲಿಸಿಕೊಳ್ಳುವಂತಹ ಅದ್ಭುತ ಕಲಾವಿದರು ಈ ಸಂಸ್ಥೆಯಿಂದ ಹೊರಹೊಮ್ಮಲಿ ಎಂದರು ಎಸ್.ನಾರಾಯಣ್.

Related Articles

ಇತ್ತೀಚಿನ ಸುದ್ದಿಗಳು