Tuesday, June 25, 2024

ಸತ್ಯ | ನ್ಯಾಯ |ಧರ್ಮ

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ : ಕಲಬುರಗಿಯಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ  

ಕಲಬುರಗಿ : ಸೆಪ್ಟಂಬರ್‌ 17 ಹೈದರಾಬಾದ್‌ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯಾಗಿದೆ. ಈ ವಿಶೇಷ ದಿನದಂದು ರಾಜ್ಯದ 7 ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದ್ದು ಕಲಬುರಗಿಯ ಈ ಅಮೃತ ಮಹೋತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಂಡಿದ್ದಾರೆ.

1948 ಸೆಪ್ಟಂಬರ್ 17, ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಾದ ಕಲಬುರಗಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳು ಹೈದ್ರಾಬಾದ್ ನಿಜಾಮರ ಆಳ್ವಿಕೆಯಿಂದ ಸ್ವತಂತ್ರಗೊಂಡ ದಿನವಾಗಿದೆ. ಆದ್ದರಿಂದ ಆ ಭಾಗದ ಜನತೆಗೆ ಸೆಪ್ಟೆಂಬರ್ 17 ಸ್ವಾತಂತ್ರ್ಯೋತ್ಸವದ ದಿನವಾಗಿದೆ. ಈ ವಿಶೇಷ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ, ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದ್ದಾರೆ.

ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಯಾದಗಿರಿ, ವಿಜಯನಗರ ಮತ್ತು  ಬೀದರ್  ಈ ಏಳು ರಾಜ್ಯಗಳಲ್ಲಿ ಕಲ್ಯಾಣ ಕರ್ನಾಟಕ ಎಂದೇ ಮರುನಾಮಕೊಂಡಿರುವ ಹೈದರಾಬಾದ್‌ ಕರ್ನಾಟಕದ ಅಮೃತ ಮಹೊತ್ವವ ಜರುಗುತಿದ್ದು ರಾಜ್ಯದ ಹಲವು ಗಣ್ಯರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು