Saturday, March 15, 2025

ಸತ್ಯ | ನ್ಯಾಯ |ಧರ್ಮ

ರಾಜ್ಯಪಾಲರ ಹಿಂದಿ ಭಾಷಣದ ವಿರುದ್ಧ ಕನ್ನಡದ ಕಟ್ಟಾಳು ವಾಟಾಳ್ ನಾಗರಾಜ್ ಕಿಡಿ

ರಾಮನಗರ : ರಾಜ್ಯಪಾಲರ ಹಿಂದಿ ಭಾಷಣದ ವಿರುದ್ಧ ಕನ್ನಡದ ಕಟ್ಟಾಳು ವಾಟಾಳ್ ನಾಗರಾಜ್ ಕಿಡಿ ಕಾರಿದ್ದಾರೆ

ವಿಧಾನಸಭೆ ಜಂಟಿ ಅಧಿವೇಶನದ ವೇಳೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಿಂದಿಯಲ್ಲಿ ಭಾಷಣ ಮಾಡಿದ್ದನ್ನು ವಿರೋಧಿಸಿರುವ ವಾಟಾಳ್ ನಾಗರಾಜ್ ಇನ್ನು ಮುಂದೆ ರಾಜ್ಯಪಾಲರು ಭಾಷಣವನ್ನು ಕನ್ನಡದಲ್ಲಿ ಮಾಡಲಿ ಎಂದು ಆಗ್ರಹಿಸಿದ್ದಾರೆಕರ್ನಾಟಕ ರಾಜ್ಯದ ಮೇಲೆ ಹಿಂದಿ ಹೇರಿಕೆಯಾಗುತ್ತಿದ್ದು ಇಲ್ಲಿ ಹಿಂದಿ ಭಾಷಣದ ಅಗತ್ಯವಿಲ್ಲ ಎಂದ ವಾಟಾಳ್ ನಾಗರಾಜ್, ಇದು ಕರ್ನಾಟಕವೇ ಹೊರತು ಬೇರೆ ರಾಜ್ಯವಲ್ಲ.. ಹೀಗಾಗಿ ಇಲ್ಲಿ ಕನ್ನಡದಲ್ಲಿ ಭಾಷಣ ಮಾಡಿ ಎಂದು ರಾಜ್ಯಪಾಲರನ್ನು ಒತ್ತಾಯಿಸಿದ್ರು.

ರಾಮನಗರದ ಐಜೂರು ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವ ಮೂಲಕ ಕರ್ನಾಟಕದ ಮೇಲೆ ಹಿಂದಿ ಹೇರಿಕೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ರು. ಅದಲ್ಲದೆ ರಾಜ್ಯದ ಶಾಸಕರೆಲ್ಲರೂ ರಾಜ್ಯಪಾಲರ ಹಿಂದಿ ಭಾಷಣಕ್ಕೆ ವಿರೋಧ ವ್ಯಕ್ತಪಡಿಸಬೇಕಿತ್ತು. ಆದರೆ ಯಾವೊಬ್ಬ ಶಾಸಕನೂ ಈ ಕುರಿತು ಮಾತನಾಡಿಲ್ಲ ಎಂದು ಶಾಸಕರ ವಿರುದ್ಧವೂ ವಾಟಳ್ ಹರಿಹಾಯ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page