Friday, June 14, 2024

ಸತ್ಯ | ನ್ಯಾಯ |ಧರ್ಮ

ಆಗದು ಎಂದು, ಕೈಲಾಗದು ಎಂದು……. ಬಜೆಟ್ ಭಾಷಣ ಆರಂಭಿಸಿದ ಸಿ ಎಂ ಸಿದ್ದರಾಮಯ್ಯ

ಬೆಂಗಳೂರು: ಸದನದಲ್ಲಿ ಬಿಜೆಪಿ ಗದ್ದಲ, ಘೋಷಣೆಗಳ ನಡುವೆ ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2024ರ ಭಾಷಣ ಆರಂಭಿಸಿದ್ದಾರೆ.

ರಾಜ್‌ಕುಮಾರ್ ಅಭಿನಯದ ಬಂಗಾರದ ಮನುಷ್ಯ ಚಿತ್ರದ ಹಾಡು ʼಆಗದು ಎಂದು, ಕೈಲಾಗದು ಎಂದು ಕೈಕಟ್ಟಿ ಕುಳಿತರೆ…” ಮತ್ತು ಶಿವಶರಣೆ ಆಯ್ದಕ್ಕಿ ಲಕ್ಕಮ್ಮ ಅವರ ವಚನವನ್ನು ಉಲ್ಲೇಖಿಸಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ 15 ನೇ ಬಜೆಟ್ ಭಾಷಣವನ್ನು ( budget speech) ಪ್ರಾರಂಭಿಸಿದರು. 

ಇಂದು ಬೆಳಗ್ಗೆ 10:15ಕ್ಕೆ ಕರ್ನಾಟಕ ಬಜೆಟ್ ಭಾಷಣ (Karnataka Budget 2024) ಆರಂಭವಾಯಿತು. ಈ ವರ್ಷದ ಬಜೆಟ್ ಗಾತ್ರ ₹ 3,71,383 ಕೋಟಿ. ಈ ಬಜೆಟ್‌ನಲ್ಲಿ ಕರ್ನಾಟಕ ಎದುರಿಸುತ್ತಿರುವ ತೀವ್ರ ಬರ ಪರಿಸ್ಥಿತಿಯನ್ನು ಪರಿಗಣಿಸಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಲಾಗಿದೆ.

ಕಳೆದ ವರ್ಷ ಮೇ 10 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಪ್ರಮುಖ ಚುನಾವಣಾ ಭರವಸೆಗಳು ಬಜೆಟ್‌ನ ಪ್ರಮುಖ ಭಾಗವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

“ಭಾರತವು 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ ಬಜೆಟ್ ಮಂಡಿಸಲು ನನಗೆ ಸಂತೋಷವಾಗುತ್ತಿದೆ. ಎಲ್ಲಾ ಐದು ಗ್ಯಾರಂಟಿಗಳನ್ನು ಪ್ರಾರಂಭಿಸಲಾಗಿದೆ ಮತ್ತು ಫಲಾನುಭವಿಗಳನ್ನು ಮರುಪರಿಶೀಲಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಹೆಚ್ಚಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು,” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

Related Articles

ಇತ್ತೀಚಿನ ಸುದ್ದಿಗಳು