Thursday, June 19, 2025

ಸತ್ಯ | ನ್ಯಾಯ |ಧರ್ಮ

ಕರ್ನಾಟಕ ಧ್ವಜಕ್ಕೆ ಬೆಂಕಿ ; ತಡವಾಗಿ ಬೆಳಕಿಗೆ ಬಂದ ಪ್ರಕರಣ

ವಾರಣಾಸಿ ಮೂಲದ ಸಾಫ್ಟವೇರ್ ಇಂಜಿನಿಯರ್ ಒಬ್ಬ ಕರ್ನಾಟಕ ಧ್ವಜಕ್ಕೆ ಬೆಂಕಿ ಹಾಕಿದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ HSR ಲೇಔಟ್ ನಲ್ಲಿ 30 ವರ್ಷದ ಅಮೃತೇಶ್ ತಿವಾರಿ ಎಂಬ ವ್ಯಕ್ತಿ ಕರ್ನಾಟಕ ಧ್ವಜಕ್ಕೆ ಬೆಂಕಿ ಹಾಕಿ ಸುಟ್ಟಿದ್ದಾನೆ.

ಈ ಸಂಬಂಧ ಪೊಲೀಸರು ಅಮೃತೇಶ್ ತಿವಾರಿಯನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ದೆಹಲಿಯ ಐಐಟಿಯಲ್ಲಿ ಓದಿರುವ ತಿವಾರಿ ಕಳೆದ 2 ತಿಂಗಳಿನಿಂದ ಬೆಂಗಳೂರಿನ HSR ಲೇಔಟ್ ನಲ್ಲಿ ವಾಸವಾಗಿದ್ದಾನೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪರಂಗಿಪಾಳ್ಯದ 24ನೇ ಮೇನ್‌ನ 22ನೇ ಕ್ರಾಸ್‌ನಲ್ಲಿ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ಕರ್ನಾಟಕ ಧ್ವಜಕ್ಕೆ ಬೆಂಕಿ ಹಚ್ಚಿರುವುದು ಪತ್ತೆಯಾಗಿದೆ. ನಂತರ ಕನ್ನಡ ಕಾರ್ಯಕರ್ತ ನವೀನ್ ನರಸಿಂಹ HSR ಲೇಔಟ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ನಂತರ ಆತನಿಂದ ಧ್ವಜ ಕಸಿದುಕೊಂಡ ಬಳಿಕ ತಕ್ಷಣವೇ ಪೊಲೀಸರಿಗೆ ತಿಳಿಸಿದ್ದಾರೆ. ಘಟನೆ ತೀವ್ರತೆ ಪಡೆದುಕೊಳ್ಳುವ ಮುನ್ನವೇ ಪೊಲೀಸರು ಜಾಗೃತರಾಗಿ ಅಮೃತೇಶ್ ತಿವಾರಿಯನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page