Monday, June 17, 2024

ಸತ್ಯ | ನ್ಯಾಯ |ಧರ್ಮ

ಅನಂತ್‌ ಕುಮಾರ್‌ ಹೆಗ್ಡೆಯ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೂಡಲಸಂಗಮ: ಕಾರವಾರ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ಕಾರಣಕ್ಕೆ ರಾಜ್ಯದ ಮುಖ್ಯಮಂತ್ರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಅವರ ಭಾಷೆ ಮತ್ತು ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಶನಿವಾರ ಕೂಡಲಸಂಗಮ ಹೆಲಿಪ್ಯಾಡ್ ಬಳಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರೂ ಮುಖ್ಯಮಂತ್ರಿಗಳು ಹಾಜರಾಗುತ್ತಿಲ್ಲ ಎಂದು ಕಾರವಾರ ಸಂಸದ ಅನಂತಕುಮಾರ್ ಹೆಗಡೆ ಅವರು ಅಸಂಸದೀಯ ಪದಗಳನ್ನು ಬಳಸಿ ಆರೋಪ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ಹೇಳಿಕೆಗಳು ಅವರ ಸಂಸ್ಕೃತಿಯನ್ನು ಬಿಂಬಿಸುತ್ತವೆ. ಕೇಂದ್ರ ಸಚಿವರಾಗಿದ್ದಾಗ ಸಂವಿಧಾನವನ್ನೇ ಬದಲಾಯಿಸುವುದಾಗಿ ಹೇಳಿದ್ದ ಅನಂತ್ ಕುಮಾರ್ ಹೆಗಡೆ ಅವರಿಂದ ಉತ್ತಮ ಸಂಸ್ಕೃತಿ ನಿರೀಕ್ಷಿಸಲು ಸಾಧ್ಯವಿಲ್ಲ. ಅವರ ಭಾಷೆ ಸುಸಂಸ್ಕೃತವಲ್ಲ. ಈ ಭಾಷೆ ಅವರ ಘನತೆಗೆ ಧಕ್ಕೆ ತರುತ್ತದೆ ಎಂದರು.

ಅನಂತ್‌ ಕುಮಾರ್‌ ಹೆಗ್ಡೆ ಈ ಮೊದಲು ಸಿದ್ಧರಾಮಯ್ಯ ರಾಮ ಮಂದಿರ ಉದ್ಘಾಟನೆಗೆ ಬರುವುದಿಲ್ಲ ಎಂದಿದ್ದರ ಕುರಿತು ಪ್ರತಿಕ್ರಿಯಿಸಿ “ನೀನು ಬರದೆ ಇದ್ದರೂ ರಾಮ ಮಂದಿರ ಉದ್ಘಾಟನೆ ನಡೆಯುತ್ತದೆ ಮಗನೆ ಎಂದು ಅನಾಗರಿಕವಾಗಿ ಮಾತನಾಡಿದ್ದರು.

Related Articles

ಇತ್ತೀಚಿನ ಸುದ್ದಿಗಳು