Saturday, June 21, 2025

ಸತ್ಯ | ನ್ಯಾಯ |ಧರ್ಮ

ಮಲ್ಲಿಕಾರ್ಜುನ ಖರ್ಗೆಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್

ದೆಹಲಿ ಸರ್ಕಾರದ ಮೇಲಿನ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ವಿರೋಧಿಸಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಭಿಪ್ರಾಯ ದಾಖಲಿಸಿದ್ದಾರೆ. ಆ ಮೂಲಕ ಆಡಳಿತಾತ್ಮಕವಾಗಿ ರಾಜ್ಯ ಸರ್ಕಾರಗಳ ಮೇಲಿನ ‌ಹಸ್ತಕ್ಷೇಪ ಸರಿಯಲ್ಲ ಎಂದು ಹೇಳಿದ್ದಾರೆ.

“ಬಿಜೆಪಿ ಸರ್ಕಾರದ ‌ಸರ್ವಾಧಿಕಾರಿ ನಡೆಗೆ, ದೆಹಲಿ ಸರ್ಕಾರದ ಮೇಲೆ ಹೇರುತ್ತಿರುವ ಸುಗ್ರೀವಾಜ್ಞೆ ಸ್ಪಷ್ಟ ಸಾಕ್ಷಿಯಾಗಿದೆ. ಇದು ಕೇವಲ ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದಲ್ಲ, ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಹೊಡೆತ ಬಿದ್ದರೆ, ಪ್ರಜಾಪ್ರಭುತ್ವವನ್ನು ಉಳಿಸಲು ಒಟ್ಟಾಗಿ ಕೆಲಸ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಂವಿಧಾನ ಮತ್ತು ದೇಶಕ್ಕಿಂತ ಯಾವುದೇ ವ್ಯಕ್ತಿ ಅಥವಾ ಯಾವುದೇ ಪಕ್ಷ ದೊಡ್ಡದಲ್ಲ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ.

ಇತ್ತ ಬೆಂಗಳೂರಿನಲ್ಲಿ ನಡೆಯುತ್ತಿರುವ ತೃತೀಯ ರಂಗ ಮತ್ತು UPA ಮೈತ್ರಿಕೂಟದ ಸಭೆಗೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಭಾಗವಹಿಸಿ ಒಕ್ಕೂಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ಹಾಗೆಯೇ ದೆಹಲಿ ಸರ್ಕಾರದ ಪರವಾಗಿ ತಮ್ಮ ಅಭಿಪ್ರಾಯ ದಾಖಲಿಸಿದ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಧನ್ಯವಾದ ತಿಳಿಸಿದ್ದಾರೆ. “ದೆಹಲಿಯ ಜನರ ಪರವಾಗಿ ನಿಂತಿದ್ದಕ್ಕಾಗಿ ಖರ್ಗೆ ಜೀ ಅವರಿಗೆ ಧನ್ಯವಾದಗಳು. ಈ ಸುಗ್ರೀವಾಜ್ಞೆಯು ಭಾರತ ವಿರೋಧಿ ಮತ್ತು ರಾಷ್ಟ್ರವಿರೋಧಿಯಾಗಿದೆ. ಇದರ ಬಗ್ಗೆ ಎಲ್ಲರೂ ದನಿಗೂಡಿಸಬೇಕಿದೆ” ಎಂಬುದಾಗಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page