Friday, June 20, 2025

ಸತ್ಯ | ನ್ಯಾಯ |ಧರ್ಮ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ದಾದಾಪೀರ್‌ ಜೈಮನ್‌, ತಮ್ಮಣ್ಣ ಬೀಗಾರ ಭಾಜನ

ನವದೆಹಲಿ: 2022 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ದಾದಾಪೀರ್‌ ಜೈಮಾನ್‌ ಮತ್ತು ತಮ್ಮಣ್ಣ ಬೀಗಾರ ಅವರು ಭಾಜನರಾಗಿದ್ದಾರೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್‌ ಜೈಮನ್‌ ಅವರ ʼನೀಲಕುರಿಂಜಿʼ ಕೃತಿಗೆ ಯುವ ಸಾಹಿತ್ಯ ಪ್ರಶಸ್ತಿ ದೊರೆತಿದೆ.

ಶಿರಸಿಯ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರ ʼಬಾವಲಿ ಗುಹೆʼ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ದೊರೆತಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು 50000 ನಗದು ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ.

ʼನೀಲಕುರಿಂಜಿʼವನ್ನು ರಾಯಚೂರು ಜಿಲ್ಲೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನ ಪ್ರಕಟಿಸಿದ್ದರೆ, ʼಬಾವಲಿ ಗುಹೆʼ ಯನ್ನು ಬೆಂಗಳೂರಿನ ಅಭಿನವ ಪ್ರಕಾಶನ ಪ್ರಕಟಿಸಿದೆ.

ಪ್ರಶಸ್ತಿಯನ್ನು ಡಿಸೆಂಬರ್‌ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page